NEWS

ಸರ್ಕಾರದಿಂದ ಕೊರೊನಾ ಸೈನಿಕರಿಗೆ ಸ್ಫೂರ್ತಿ    

ಗದಗ ಜಿಲ್ಲೆ ಕೋವಿಡ್ -19  ನಿಯಂತ್ರಣ l ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊರೊನಾ  ವೈರಸ್ ನಿಯಂತ್ರಣಕ್ಕಾಗಿ  ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳು   ಮುಂಜಾಗ್ರತಾ  ಕ್ರಮ   ಕೊರೊನಾ ಸೈನಿಕರಾದ ವೈದ್ಯರು, ನರ್ಸ್‌  , ಆಶಾ ಕಾರ್ಯಕರ್ತೆಯರಿಗೆ ಸ್ಫೂರ್ತಿ  ತುಂಬುವ ಕಾರ್ಯ  ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ  ಶ್ರೀರಾಮುಲು ಹೇಳಿದರು.

ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು  ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.  ರಾಜ್ಯದ 21 ಜಿಲ್ಲೆಗಳಲ್ಲಿನ ಸತತವಾಗಿ ಪ್ರವಾಸ ಮಾಡಿ  ಕೊರೊನಾ ನಿಯಂತ್ರಣದ  ಸ್ಥಿತಿಗತಿ ಕುರಿತು ಪರಿಶೀಲನೆ ನಡೆಯುತ್ತಿದೆ.  ಅಲ್ಲಿನ ಜಿಲ್ಲಾಡಳಿತ,  ಆರೋಗ್ಯ ಇಲಾಖೆ ,   ವೈದ್ಯರು, ಸಂಸದರಿಂದ ಮಾಹಿತಿ ಸಂಗ್ರಹಣೆ ಮಾಡಿ ಕೊರೊನಾ  ನಿಯಂತ್ರಣಕ್ಕಾಗಿ  ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ -19  ಚಿಕಿತ್ಸೆಯಲ್ಲಿದ 82 ವರ್ಷದ ವೃದ್ಧೆ ಸಾವನ್ನಪ್ಪಿದ್ದು  ಪಿ-166 ಪ್ರಕರಣದ   ಪ್ರಾಥಮಿಕ ಸಂಪರ್ಕದಲ್ಲಿದ್ದಂತಹ   82 ಜನರನ್ನು   ಗುರುತಿಸಿ ಪ್ರತ್ಯೇಕ ನಿಗಾದಲ್ಲಿಡಲಾಗಿದೆ ಎಂದರು.

ಪರೀಕ್ಷೆಗೆ ಕಳುಹಿಸಿದ ಎಲ್ಲ ಮಾದರಿಗಳು ನಕಾರಾತ್ಮಕವಾಗಿವೆ. ಮುಂಜಾಗ್ರತಾ ಕ್ರಮವಾಗಿ ಕೋವಿಡ್ -19 ಪತ್ತೆಯಾದ  2 ಪ್ರದೇಶಗಳನ್ನು ಕಂಟೇನ್‌ಮೆಂಟ್ ಏರಿಯಾ ಎಂದು ಘೋಷಿಸಿ ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿವಿಧ ಪಿಂಚಣಿ ಯೋಜನೆಗಳ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್ ಮಿತ್ರರ ಮುಖಾಂತರ ಸೇವೆ ಒದಗಿಸಲು ಕ್ರಮ ಜರುಗಿಸಲಾಗುತ್ತಿದೆ.  ಜಿಲ್ಲೆಯಲ್ಲಿ ಇದುವರೆಗೆ ಶೇ.82 ರಷ್ಟು ಕುಟುಂಬಗಳಿಗೆ ಪಡಿತರವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.  ಶಾಸಕ ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ