NEWSನಮ್ಮರಾಜ್ಯಬೆಂಗಳೂರುರಾಜಕೀಯ

ಸರ್ಕಾರದ ವಿರುದ್ಧ ಆಕ್ರೋಶ: ಜು.27ರ ಮಧ್ಯರಾತ್ರಿವರೆಗೂ ರಸ್ತೆಗಿಳಿಯಲ್ಲ ಆಟೋ, ಕ್ಯಾಬ್‌, ಖಾಸಗಿ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಶಕ್ತಿಯೋಜನೆ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವುದರಿಂದ ಪ್ರಸ್ತುತ ಖಾಸಗಿ ಬಸ್‌, ಆಟೋ, ಕ್ಯಾಬ್‌ಗಳ ಬೇಡಿಕೆ ಕಡಿಮೆ ಆಗಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಈ ಎಲ್ಲರೂ ಮುಂದಾಗಿದ್ದಾರೆ.

ಇದೇ ಜುಲೈ 27 ರಂದು ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳ ಮಾಲೀಕರು ಮತ್ತು ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದು, ಹೀಗಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಕೆಲ ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಶಕ್ತಿ ಯೋಜನೆ, ವೈಟ್ ಬೋರ್ಡ್ ವಾಹನವನ್ನು ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ.

ಸರ್ಕಾರದ ಈ ನೀತಿಗಳಿಂದ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಚಾಲಕರು ಮಾಡಿರುವ ಸಾಲ, ವಿಮೆ ಕಟ್ಟಲು ಮತ್ತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ 23 ಸಾರಿಗೆ ಸಂಘಟನೆಗಳು ಸೇರಿ ಪ್ರತಿಭಟನೆಗೆ ಮುಂದಾಗುತ್ತಿರುವುದಾಗಿ ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ