NEWSನಮ್ಮರಾಜ್ಯ

ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ ತಿದ್ದುಪಡಿ

ಸಚಿವ ಸಂಪುಟ ಸಭೆ ತೀರ್ಮಾನ l ಸಚಿವ ಮಾಧುಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತೆರಿಗೆ ಕಾನೂನುಗಳಲ್ಲಿನ ಕೆಲವು ಉಪಬಂಧಗಳನ್ನು ಸಡಿಲಿಸಲು ಪೂರಕವಾಗುವಂತೆ ಅಧ್ಯಾದೇಶ ಹೊರಡಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದರು.

ವಿಧಾನ ಸೌಧಧ ಸಮ್ಮೇಳನ ಸಭಾಂಗಣದಲ್ಲಿ ಇಂದು ಎರಡನೇ ಬಾರಿಗೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೋವಿಡ್-19 ಮಹಾಮಾರಿಯ ಸಂಕಷ್ಟಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ-2017 ರಲ್ಲಿ ಕಾಲಮಿತಿ ಅಥವಾ ಸಮಯದ ಅವಧಿಯ ವಿಸ್ತರಣೆ ಹಾಗೂ ಕಾರ್ಯಾನುಷ್ಠಾನದ ಮೇಲೆ ಬೀರುವ ಪ್ರಕರಣಗಳೂ ಒಳಗೊಂಡಂತೆ ಅಧ್ಯಾದೇಶ ಹೊರಡಿಸಲಾಗುವದು ಎಂದರು.

ಕೇಂದ್ರ ಸರ್ಕಾರವು ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ-2017 ಕ್ಕೆ ಕೆಲವು ತಿದ್ದುಪಡಿ ಮಾಡಿ ಈಗಾಗಲೇ ಅಧ್ಯಾದೇಶ ಹೊರಡಿಸಿರುವುದರಿಂದಲೂ, ಸರಕು ಮತ್ತು ಸೇವೆಗಳ ತೆರಿಗೆಯು ಇಡೀ ರಾಷ್ಟ್ರದಲ್ಲೇ ಏಕ ರೂಪ ತೆರಿಗೆ ಪದ್ಧತಿಯಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಲ್ಲದಿರುವುದರಿಂದ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ-2017 ಕ್ಕೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದು ವಿವರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ