NEWSನಮ್ಮರಾಜ್ಯಬೆಂಗಳೂರು

ಸಾರಿಗೆ ಅಧಿಕಾರಿಗಳ ದ್ವಂದ್ವ ನಡೆಗೆ ನೌಕರರು ಕಿಡಿ: ಸಿಪಿಐ ಪಕ್ಷದ ಅಭ್ಯರ್ಥಿಪರ ಮತಯಾಚನೆ – ಆದರೂ ಶಿಕ್ಷೆಯಿಂದ ಪಾರು..!?

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಸಾರಿಗೆ ನಿಗಮಗದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದಕ್ಕೆ ಸುಣ್ಣ- ಸಿಪಿಐ ಪಕ್ಷದ ಅಭ್ಯರ್ಥಿಪರ ಮತಯಾಚನೆ ಮಾಡಿದರೂ ಅಮಾನತಾಗದ ನೌಕರರು

ಬಳ್ಳಾರಿ: ಸಾರಿಗೆ ನಿಗಮಗದ ಯಾವುದೇ ನೌಕರರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಮತಯಾಚನೆ, ಪ್ರಚಾರ ಮಾಡುವುದು ಕಂಡು ಬಂದರೆ ಅವರನ್ನು ಕೂಡಲೇ ಅಮಾನತು ಮಾಡಿ ವಿಚಾರಣೆಗೊಳಪಡಿಸುವ ನಿಯಮವಿದೆ. ಈ ನಿಯಮವನ್ನು ಕೆಲವರಿಗಷ್ಟೇ ಅನ್ವಯವಾಗಿಸಿ ಇನ್ನು ಕೆಲ ನೌಕರರನ್ನು ರಕ್ಷಿಸಲು ಅಧಿಕಾರಿಗಳೆ ಮುಂದಾದಂತೆ ಕಾಣಿಸುತ್ತಿದೆ.

ಇದಕ್ಕೆ ತಾಜಾ ನಿರ್ದಶನ ಎಂಬಂತೆ, ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಪರ ಮತಯಾಚನೆ ಮಾಡಿದ ಆರೋಪದ ಮೇರೆಗೆ ಯಾದಗಿರಿ ವಿಭಾಗದ ಚಾಲಕ ಕಂ ನಿರ್ವಾಹಕ ಸೂರ್ಯ ಪ್ರಕಾಶ್‌ ಎಂಬುವರನ್ನು ಕೇವಲ 8 ಗಂಟೆಯೊಳಗೆ ಅಮಾನತು ಮಾಡಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶವನ್ನು ಎಲ್ಲರೂ ಪಾಲಿಸಲೇ ಬೇಕು. ಆದರೆ, ಅದರಂತೆ ಬಳ್ಳಾರಿ ವಿಭಾಗದ ಸಾರಿಗೆ ಸಂಸ್ಥೆಯ ನೌಕರರು ಮತ್ತು ಎಐಟಿಯುಸಿ ಫೆಡರೇಶನ್‌ ಪದಾಧಿಕಾರಿ ಜಿ. ಶಿವಕುಮಾರ್ ಸಾರಿಗೆ ಸಂಸ್ಥೆಯ ನೌಕರ ಮತ್ತು ಸಂಘಟನೆಯ ಮುಖಂಡ ಸಿಪಿಐ ಪಕ್ಷದ ಅಭ್ಯರ್ಥಿಯೊಡನೆ ಮತ ಪ್ರಚಾರದಲ್ಲಿ ತೊಡಗಿರುವ ಪ್ರತ್ಯಕ್ಷ ಪುರಾವೆ ಇದ್ದರೂ ಕೂಡ ಅವರ ವಿರುದ್ಧ ಈವರೆಗೂ ಏಕೆ ಕ್ರಮ ಜರುಗಿಸಿಲ್ಲ ಎಂದು ನೌಕರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಲ್ಯಾಣ ಸಾರಿಗೆ ಸಂಸ್ಥೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ, ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿದ ಕೇವಲ 8 ಗಂಟೆಯಲ್ಲಿ ಒಬ್ಬ ನೌಕರನ ಅಮಾನತು ಮಾಡುತ್ತೀರಿ. ಆದರೆ AITUC ಬಳ್ಳಾರಿ ವಿಭಾಗದ ಮುಖಂಡರು ಸಿಪಿಐ ಪಕ್ಷದ ಮಾತಯಾಚನೆ ವೇಳೆ ಸಿಕ್ಕ ಭಾವ ಚಿತ್ರಗಳು ಕಳೆದ ಒಂದು ವಾರದಿಂದ ಸಾಮಾಜಿಕ ಜಾಲಾತಣಗಳಲ್ಲಿ ಹರಿದಾಡುತ್ತಿದ್ದರು ಏಕೆ ಕ್ರಮ ಜರುಗಿಸಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.

ಅಲ್ಲದೆ ಮೇಲಧಿಕಾರಿಗಳ ಈ ದ್ವಂದ್ವ ನಿಲುವು ಸರಿಯಲ್ಲ ಎಲ್ಲ ನೌಕರರನ್ನು ಸರಿ ಸಮಾನವಾಗಿ ಕಾಣಬೇಕು ಎಐಟಿಯುಸಿಯಲ್ಲಿ ಈ ನೌಕರರು ಇದ್ದಾರೆ ಎಂಬ ಕಾರಣಕ್ಕೆ ಅವರು ಯಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಪರ ಪ್ರಚಾರ ಮಾಡಬಹುದೇ ಎಂದು ಪ್ರಶ್ನಿಸುತ್ತಿರುವ ನೌಕರರು ಈ ರೀತಿಯ ನಡೆಯನ್ನು ಅಧಿಕಾರಿಗಳು ಬದಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ನಾವು ಕೂಡ ಚುನಾವಣೆ ಆಗುವವರೆಗೂ ಈ ಬಗ್ಗೆ ಕಾದು ನೋಡುತ್ತೇವೆ ಅಷ್ಟರ ಒಳಗೆ ಅಧಿಕಾರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಆ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕೋರ್ಟ್‌ ಮೊರೆ ಹೋಗುತ್ತೇವೆ ಕೋರ್ಟ್‌ನಲ್ಲಿ ಅವರು ಈ ಬಗ್ಗೆ ಸಮಜಾಯಿಷಿ ನೀಡಲಿ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ