CrimeNEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ಕ್ವಾರ್ಟರ್ಸ್‌ ಖಾಲಿ ಮಾಡುವ ನೋಟಿಸ್‌ ಸಂಬಂಧ ಬಿಎಂಟಿಸಿ ಎಂಡಿ ಇತರರಿಗೆ ಸಿಟಿ ಕೋರ್ಟ್‌ನಿಂದ ತುರ್ತು ನೋಟಿಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮುಷ್ಕರದ ವೇಳೆ ವಜಾ ಮಾಡಿರುವ ನೌಕರರಿಗೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಅಂತಿಮ ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ನೋಟಿಸ್‌ ಸಂಬಂಧ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಸೇರಿ ಇತರರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ಸೆಪ್ಟೆಂಬರ್‌ 20ಕ್ಕೆ ವಿಚಾರಣೆ ಮುಂದೂಡಿದೆ.

ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಅಂತಿಮ ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ಕೋರಿ ಕಳೆದ ಶನಿವಾರ ಬಿಎಂಟಿಸಿ ನೌಕರ ಜಯಪ್ರಕಾಶ್‌ ಸಿಟಿ ಸಿವಿಲ್‌ ನ್ಯಾಯಾಲಯದ ಮೊರೆ ಹೋಗಿದ್ದರು. 56ನೇ ಕೋರ್ಟ್‌ ಹಾಲ್‌ನ ನ್ಯಾಯಾಧೀಶರಾದ ಕೃಷ್ಣಮೂರ್ತಿ ಆರ್‌. ಪಡಸಲಗಿ ಅವರಿದ್ದ ನ್ಯಾಯಪೀಠ ಅರ್ಜಿ ಪುರಸ್ಕರಿಸಿತ್ತು.

ಇನ್ನು ನೌಕರ ಜಯಪ್ರಕಾಶ್‌ ಅವರ ಪರ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ನೀಡುವಂತೆ ನ್ಯಾಯಾಧೀಶರ ಮುಂದೆ ಶನಿವಾರ ವಾದ ಮಂಡಿಸಿದ್ದರು. ಅವರ ವಾದವನ್ನು ಆಲಿಸಿದ ನ್ಯಾಯಪೀಠ ತೀರ್ಪನ್ನು ಆಗಸ್ಟ್‌ 23ಕ್ಕೆ (ಇಂದಿಗೆ) ಕಾಯ್ದಿರಿಸಿತು.

ಸೋಮವಾರ (ಇಂದು) ಮತ್ತೆ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಪೀಠ ನೌಕರರಿಗೆ ಅಂತಿಮ ನೋಟಿಸ್‌ ನೀಡಿರುವ ಸಂಬಂಧ ಬಿಎಂಟಿಸಿ ಎಂಡಿ ಸೇರಿ ಇತರರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ಸೆಪ್ಟೆಂಬರ್‌ 20ಕ್ಕೆ ವಿಚಾರಣೆ ಮುಂದೂಡಿತು.

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಏಪ್ರಿಲ್‌ 7 ರಿಂದ 15 ದಿನಗಳ ಕಾಲ ಸಾರಿಗೆ ನೌಕರರು ನಡೆಸಿದ್ದ ಮುಷ್ಕರದ ವೇಳೆ 3 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾ ಮಾಡಲಾಗಿದೆ. ಈ ನಡುವೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಬಿಎಂಟಿಸಿ ಅಧಿಕಾರಿಗಳು ಅಂತಿಮ ನೋಟಿಸ್‌ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಮತ್ತು ಇತರರ ವಿರುದ್ಧ ನೌಕರ ಜಯಪ್ರಕಾಶ್‌ ಎಂಬುವರು  ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಏನೂತಪ್ಪು ಮಾಡದ ನಮ್ಮನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿದ್ದು ಅಲ್ಲದೇ ಈಗ ಕ್ವಾರ್ಟರ್ಸ್‌ ಖಾಲಿ ಮಾಡುವಂತೆ ಒತ್ತಡ ಹೇರುತ್ತಿರುವ ಅಧಿಕಾರಿಗಳ ವಿರುದ್ಧ ನೌಕರರು ಕಿಡಿಕಾರುತ್ತಿದ್ದಾರೆ. ಏತನ್ಮಧ್ಯೆ ಜಯ ಪ್ರಕಾಶ್‌ ಅವರು ಅಧಿಕಾರಿಗಳು ವಸತಿ ಗೃಹ ಖಾಲಿ ಮಾಡಬೇಕು ಎಂದು ನೀಡಿರುವ ನೋಟಿಸ್‌ ಸಂಬಂಧ ಸಮರ ಸಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು