NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಸರ್ಕಾರವೇ ಕೊಟ್ಟಿರುವ 9 ಭರವಸೆಗಳ ಈಡೇರಿಸಲೇ ಬೇಕು : ನೌಕರರ ಪಟ್ಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಸರ್ಕಾರವೇ ಕೊಟ್ಟಿರುವ 9 ಭರವಸೆಗಳನ್ನು ಈಡೇರಿಸಿಕೊಡುವಲ್ಲಿ ಇನ್ನೂ ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಟ ನಡೆಸುವ ಬಗ್ಗೆ ಎಚ್ಚರಿಸಲು ಇಂದು ಸಾರಿಗೆ ನೌಕರರ ಕೂಟ ಸುದ್ದಿಗೋಷ್ಠಿ ನಡೆಸಲಿದೆ.

ನಗರದ ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ಮಧ್ಯಾಹ್ನ 1.30ಕ್ಕೆ ಸುದ್ದಿಗೋಷ್ಠಿ ಆಯೋಜಿಸಿದ್ದು ಸರ್ಕಾರ ಮತ್ತು ನಿಕಟ ಪೂರ್ವ ಸಾರಿಗೆ ಸಚಿವರು ಮತ್ತು ಹಾಲಿ ಮುಖ್ಯಮಂತ್ರಿಗಳು ಲಿಖಿತವಾಗಿ ನೌಕರರಿಗೆ ಕೊಟ್ಟಿರುವ ಭರವಸೆಗಳಿ ಈಗಾಗಲೇ 2 ವರ್ಷ ಕಳೆದರೂ ಇನ್ನೂ ಈಡೇರಿಸಿಲ್ಲ. ಇದರಿಂದ ನೌಕರರು ನಿತ್ಯ ವೇದನೆ ಅನುಭವಿಸುತ್ತಿದ್ದಾರೆ.

ಹೀಗಾಗಿ  ಕೂಡಲೇ ನೌಕರರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು. ಇಲ್ಲ ನೌಕರರು ಮತ್ತೆ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗುವುದು.

ಇದಲ್ಲದೆ ನೌಕರರು ಈಗಾಗಲೇ ನೂರಾರು ಮನವಿಗಳನ್ನು ಕೊಟ್ಟಿದ್ದು ಮುಷ್ಕರದ ವೇಳೆ ಆಗಿರುವ ಸುಳ್ಳು ಪೊಲೀಸ್‌ ಪ್ರಕರಣ ಸೇರಿದಂತೆ ಇತರ ಎಲ್ಲ ಸಮಸ್ಯೆಗಳಿಂದ ನೌಕರರಿಗೆ ಮುಕ್ತಿ ನೀಡಬೇಕು. ಇಲ್ಲದಿದ್ದರೆ ಅದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತಿದೆ ಎಂದು ಎಚ್ಚರಿಸುವ ಕೆಲಸವನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ