NEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಶ್ರೀರಾಮುಲು : ಶೀಘ್ರದಲ್ಲೇ ಸಂಕಷ್ಟ ನಿವಾರಣೆ ಭರವಸೆ

ವೇತನ ಹೆಚ್ಚಳಕ್ಕೂ ಆದ್ಯತೆ l ಪೊಲೀಸ್‌ ಸೇರಿ ಇತರ ಪ್ರಕರಣಗಳ ವಾಪಸ್‌ ಪಡೆಯುವ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸಾರಿಗೆ ನಿಗಮಗಳ ನೌಕರರಿಗೆ ಸಚಿವ ಬಿ. ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.

ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ ಮಾಡಲು ಅಧಿಕಾರಿಗಳ ಜತೆ ನಿರಂತರವಾಗಿ ಚರ್ಚೆ ಮಾಡಲಾಗುತ್ತಿದೆ. ಹೀಗಾಗಿ ಅತೀ ಶೀಘ್ರದಲ್ಲೇ ನೌಕರರು ಇತರ ನೌಕರರಂತೆ ಉತ್ತಮ ಜೀವನ ನಡೆಸಲು ಬೇಕಾದ ಸರಿ ಸಮಾನ ವೇತನ ನೀಡಲಗುವುದು ಎಂದು ತಿಳಿಸಿದ್ದಾರೆ.

ಇನ್ನು ಜುಲೈ ತಿಂಗಳ ವೇತನ ಇನ್ನೂ ಸಾರಿಗೆ ನೌಕರರಿಗೆ ಬಿಡುಗಡೆಯಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಬರುವ ಗಣೇಶ ಹಬ್ಬದ ವೇಳೆ ತೊಂದರೆಯಾಗದಂತೆ ಎರಡೂ ತಿಂಗಳ ವೇತನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಸಾರಿಗೆ ಸಂಸ್ಥೆ ವಿವಿಧ ಕಾರಣಗಳಿಂ ನಷ್ಟ ಅನುಭವಿಸುತ್ತಿದೆ. ಇನ್ನು ಕೋವಿಡ್ ಸಂದರ್ಭದಲ್ಲಿ ಬಸ್‌ಗಳು ಪೂರ್ಣಪ್ರಮಾಣದಲ್ಲಿ ಭರ್ತಿಯಾಗುತ್ತಿಲ್ಲ. ಅಲ್ಲದೆ, ನೆರೆ ರಾಜ್ಯಗಳಿಗೆ ಬಸ್ ಸಂಚಾರ ಕೂಡ ಪೂರ್ಣಪರಮಾಣದಲ್ಲಿ ಬಿಡಲಾಗುತ್ತಿಲ್ಲ. ಈ ನಡುವೆ ಈಗಿನ ಸಾರಿಗೆ ಸಂಸ್ಥೆಯನ್ನು ಲಾಭವೂ ಇಲ್ಲದೆ, ನಷ್ಟವೂ ಇಲ್ಲದಂತೆ ನಡೆಸುವ ಅನಿವಾರ್ಯತೆ ಸದ್ಯದ ಸ್ಥಿತಿ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು ಮುಷ್ಕರದ ಸಮಯದಲ್ಲಿ ನೌಕರರ ವಿರುದ್ಧ ಜರುಗಿಸಿರುವ ಕ್ರಮಗಳ ಬಗ್ಗೆ ಅತೀ ಶೀಘ್ರದಲ್ಲೇ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ನೌಕರರ ಸಮಸ್ಯೆ ನಿವಾರಿಸಲಾಗುವುದು. ಹೀಗಾಗಿ ಯಾವುದೇ ನೌಕರರು ಆತಂಕಕ್ಕೆ ಒಳಗಾವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಈ ನಡುವೆ ನಿನ್ನೆ (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ, ವಾಯುವ್ಯ ನಿಗಮದ ಗೌರವಾಧ್ಯಕ್ಷ, ಹೈ ಕೋರ್ಟ್‌ ವಕೀಲ ಪಿ.ಎಚ್. ನೀರಲಕೇರಿ ಭೇಟಿಮಾಡಿ ಮುಷ್ಕರದ ಸಮಯದಲ್ಲಿ ಮಾಡಿರುವ ನೌಕರರ ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಸರಿ ಸಮಾನ ವೇತನ ನೀಡಬೇಕು ಎಂದು ಮನವಿ ಮಾಡಿದ್ದರು.

ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ವಾರದೊಳಗಾಗಿ ಸಾರಿಗೆ ನೌಕರರ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿ, ಸಾರಿಗೆ ನೌಕರರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೀಗಾಗಿ ಸಾರಿಗೆ ನೌಕರರು ಕಳೆದ ಏಪ್ರಿಲ್‌ 7ರಿಂದ ಈವರೆಗೂ ಅನುಭವಿಸುತ್ತಿರುವ ಸಂಕಷ್ಟ ಅತೀ ಶೀಘ್ರದಲ್ಲೇ ನಿವಾರಣೆ ಆಗುವ ಎಲ್ಲ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು