NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೂ 7 ವೇತನ ಆಯೋಗ ಮಾದರಿ ಪಗಾರ ಕೊಡಲು ಸರ್ಕಾರದ ಚಿಂತನೆ : ಸಾರಿಗೆ ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಕನಸ್ಸು ನನಸಾಗುವತ್ತ ನಮ್ಮ ಸರ್ಕಾರ ಹೆಜ್ಜೆ ಇಡುತ್ತಿದೆ ಎಂದು ಸಾರಿಗೆ ಬಿ.ಶ್ರೀರಾಮುಲು ಹೇಳಿದ್ದಾರೆ.

ನಮಗೂ ಸಾರಿಗೆ ನೌಕರರ ಸಮಸ್ಯೆ ಅರ್ಥವಾಗುತ್ತಿದೆ. ಹೀಗಾಗಿ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸುವುದು ಕಷ್ಟಸಾಧ್ಯವಾಗಿದ್ದರೂ ನಮ್ಮ ಸರ್ಕಾರ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವುದುಕ್ಕೆ ಹಿಂದೆ ಸರಿಯುತ್ತಿಲ್ಲ. ಆದರೆ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಇಲ್ಲಿಯವರೆಗೂ ಮುಂದಿಡಿದ್ದೆವು ಎಂದು ಸಮಾರಂಭ ಒಂದರಲ್ಲಿ ನೌಕರರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಆದರೆ ಇನ್ನು ಮುಂದೆ ಈರೀತಿಯ ಸಮಸ್ಯ ಆಗದಂತೆ ಶಾಶ್ವತ ಮುಕ್ತಿ ನೀಡಲು ಸರ್ಕಾರ ಮುಂದಡಿ ಇಟ್ಟಿದ್ದು ಅತೀಶೀಘ್ರದಲ್ಲೇ ನೌಕರರ ಬೇಡಿಕೆಯಂತೆ ವೇತನ ನೀಡುವ ಸಂಬಂಧ ಸಿಹಿ ಸುದ್ದಿ ನೀಡಲಾಗುವುದು ಎಂದು ಸ್ವತಃ ಸಾರಿಗೆ ಸಚಿವ ಶ್ರೀರಾಮುಲು ಅವರೆ ನೌಕರರಿಗೆ ತಿಳಿಸಿದ್ದಾರೆ.

ಇನ್ನು ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಆ ವೇಳೆ ನಾನೆ ಸಾರಿಗೆ ಸಚಿವನಾಗಲಿದ್ದು ಬಜೆಟ್‌ನಲ್ಲೂ ಹಣ ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ವೇತನ ಆಯೋಗದ ಮಾದರಿಯಲ್ಲೇ ನಮ್ಮ ಸರ್ಕಾರ ಈಗ ರಾಜ್ಯ ಸರ್ಕಾರಿ ನೌಕರರಿಗೆ ರಚಿಸಿರುವ 7ನೇ ವೇತನ ಆಯೋಗದಂತೆ ಸಾರಿಗೆ ನೌಕರರಿಗೂ ಇದೆ ಮಾದರಿಯಲ್ಲಿ ವೇತನ ನೀಡಲಾಗುವುದು ಎಂದು ನೌಕರರಿಗೆ ಪರೋಕ್ಷವಾಗಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ