CrimeNEWSನಮ್ಮಜಿಲ್ಲೆ

ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಬಂಧನ: ಪೊಲೀಸರ ವಿರುದ್ಧ ಪಿಸಿಆರ್‌ ಮಾಡುತ್ತೇವೆ- ವಕೀಲ ನಟರಾಜ ಶರ್ಮಾ

ಕಾರ್ಮಿಕ ಇಲಾಖೆ ಆಯುಕ್ತರು ಪೂರ್ವಗ್ರಹ ಪೀಡಿತರಾಗಿ ಮಾತನಾಡಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿ ಹಾಗೂ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಅವರನ್ನು ಕಳೆದ ರಾತ್ರಿ 11ಗಂಟೆಯಲ್ಲಿ ಪೊಲೀಸ್‌ ಠಾಣೆಗೆ ಕರೆತಂದು ಮಾ.22ರ ಬೆಳಗ್ಗೆ 11 ಗಂಟೆಯಾದರು ಬಿಡುಗಡೆ ಮಾಡಿಲ್ಲ.

ಇದು ಪೊಲೀಸರು ಸಂಪೂರ್ಣವಾಗಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ರೌಡಿಶೀಟರ್‌ನನ್ನು ಬಿಟ್ಟು ಉಳಿದವರನ್ನು 1ಗಂಟೆಯೊಳಗೆ  ಬಿಟ್ಟು ಕಳುಹಿಸಬೇಕು.  ಹಾಗೆ ಮಾಡಿಲ್ಲ.  ಹೀಗಾಗಿ ಪೊಲೀಸರ ವಿರುದ್ಧ ಪಿಸಿಆರ್‌ ಪ್ರಕರಣ ದಾಖಲಿಸಲಾಗುವುದು ಎಂದು ವಕೀಲ ನಟರಾಜ್‌ ಶರ್ಮಾ ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರು ಕಾನೂನಿನ ರೀತಿ ಹೋರಾಟ ಮಾಡುತ್ತಾರೆ. ಇದೇ ಮಾ.24ರಿಂದ ಹಮ್ಮಿಕೊಂಡಿರುವ ಮುಷ್ಕರವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಮಾಡುತ್ತಾರೆ. ಇದರಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಇದೇ ಕಳೆದ ಮಾ.20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಬರಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಮಾತ್ರ ಆಹ್ವಾನಿಸಿದ್ದು, ಉಳಿದ ನಿಗಮಗಳ ಅಧಿಕಾರಿಗಳನ್ನು ಕರೆದಿಲ್ಲ. ಮತ್ತೆ ದಿನಾಂಕವನ್ನು ಮುಂದೂಡಿದ್ದಾರೆ. ಅಂದರೆ ಅವರ ನಡೆಯಲ್ಲೇ ಗೊತ್ತಾಗುತ್ತದೆ ಅವರು ಎಷ್ಟರ ಮಟ್ಟಿಗೆ ನೌಕರರಿಗೆ ನ್ಯಾಯ ಕೊಡಿಸಲು ಮುಂದಾಗಿದ್ದಾರೆ ಎಂಬುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕಾರ್ಮಿಕ ಇಲಾಖೆಯ ಆಯುಕ್ತರು ಅತ್ತೆ ಮನೆಗೆ ಅಳಿಯ ಬಂದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಕೂರಿಸಿಕೊಂಡು ಮಾತನಾಡಿದ್ದಾರೆ. ನೌಕರರ ವೇದಿಕೆ ಪದಾಧಿಕಾರಿಗಳನ್ನು ಕರೆದು 15ದಿನ ಕಾಲವಕಾಶ ಕೊಟ್ಟು ಕಳುಹಿಸಿದ್ದಾರೆ. ಅಂದರೆ, ಆಯುಕ್ತರು ಮಾತನಾಡಿರುವುದರಲ್ಲೇ ಗೊತ್ತಾಗುತ್ತದೆ ಅವರು ಪೂರ್ವಗ್ರಹ ಪೀಡಿತರಾಗಿದ್ದರು ಎಂಬುವುದು ಎಂದು ಹೇಳಿದರು.

ಇನ್ನು ಪೊಲೀಸ್‌ನವರು ಪೊಲೀಸ್‌ ಠಾಣೆಗೆ ಕರೆತಂದ ಒಂದು ಗಂಟೆಯೊಳಗೆ  ರೌಡಿಶೀಟರ್‌  ಅಲ್ಲದವರನ್ನು ಕರೆತಂದರೆ ಬಿಟ್ಟು ಕಳುಹಿಸಬೇಕು. ಆದರೆ ಕಳುಹಿಸಿಲ್ಲ ಜತೆಗೆ ಆರೋಗ್ಯ ತಪಾಸಣೆ ಮಾಡಿಸಬೇಕಿತ್ತು ಅದನ್ನು ಮಾಡಿಸಿಲ್ಲ ಎಂದು ಕಿಡಿಕಾರಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು