NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿ ಭಾನುವಾರ ನೌಕರರಿಗೆ ಕಾನೂನು ಅರಿವು  

H B Shivaraju, Advocate.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿ ಭಾನುವಾರ ಸಾರಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಕಾನೂನು ಸಲಹೆಗಾರರು ಹಾಗೂ ಸುಪ್ರೀಂ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾರಿಗೆ ನೌಕರರು ಬಸ್‌ ಅಪಘಾತಗೊಂಡ ವೇಳೆ ಯಾವ ರೀತಿ ಕಾನೂನು ಪಾಲಿಸಬೇಕು, ಎಫ್‌ಐಆರ್‌ ಹೇಗೆ ಮಾಡಿಸಬೇಕು? ಎಂಬುವುದು ಸೇರಿದಂತೆ ಹಲವು ರೀತಿಯ ಕಾನೂನು ಅರಿವು ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಈ ಅರಿವು ಕಾರ್ಯಕ್ರಮ ಪ್ರತಿ ಭಾನುವಾರ ಸಂಜೆ 4 ಗಂಟೆಯಿಂದ 6 ಗಂಟೆಯ ವರೆಗೆ ನಡೆಯಲಿದೆ. ಹೀಗಾಗಿ ನಮ್ಮ ಸಂಘದಲ್ಲಿ ಸದಸ್ಯರಾಗಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇದರ ಜತೆಗೆ ಹೊಸದಾಗಿ ಸಂಘದ ಸದಸ್ಯತ್ವ ಪಡೆದುಕೊಂಡು ಇನ್ನು ಹೆಚ್ಚಿನ ನೌಕರರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಅಲ್ಲದೆ ಸಂಘದ ಸದಸ್ಯರು ಈಗಾಗಲೇ ತಮ್ಮದಲ್ಲದ ತಪ್ಪಿನ ಕಾರಣಕ್ಕೆ ಅಮಾನತು ಸೇರಿದಂತೆ ಇತರ ಶಿಕ್ಷೆಗೊಳಗಾಗಿದ್ದಲ್ಲಿ ಅಂಥವರ ಪರವಾಗಿ ನ್ಯಾಯಾಲಯದಲ್ಲಿ ವಕಾಲತು ವಹಿಸಿ ಪ್ರಕರಣವನ್ನು ನಡೆಸಲಾಗುತ್ತಿದೆ.

ಅದೇ ರೀತಿ ಸಂಘದ ಸದಸ್ಯತ್ವ ಪಡೆದು ಎಲ್ಲ ನೌಕರರು ಸಂಘದ ಮೂಲಕ ಕಾನೂನಿನ ಅರಿವನ್ನು ಪಡೆದುಕೊಳ್ಳುವುದರ ಜತೆಗೆ ಧೈರ್ಯವಾಗಿ ಕಾನೂನು ಹೋರಾಟವನ್ನು ಯಾವುದೆ ಶುಲ್ಕವಿಲ್ಲದೆ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇನ್ನು ಪ್ರತಿ ಭಾನುವಾರ ನಡೆಸಲು ಉದ್ದೇಶಿಸಿರುವ ಈ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಮಂದಿ ನೌಕರರು ಭಾಗವಹಿಸಿ ತಮ್ಮ ಸಮಸ್ಯೆ ಹೇಳಿಕೊಳ್ಳುವುದರ ಜತೆಗೆ ಕಾನೂನು ಅರಿವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕಾರ್ಯಕ್ರಮಕ್ಕೆ ಭಾಗವಹಿಸುವವರು ಮೊದಲೇ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸಮವಸ್ತ್ರ ಧರಿಸಿ ಭಾಗವಹಿಸಬೇಕು. ಅಂದು ಎಲ್ಲರಿಗೂ ಉಪಾಹಾರ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಕೆಎಸ್‌ಆರ್‌ಟಿಸಿ ಹುಣಸೂರು ಘಟಕದ ಚಾಲಕ ಗೋವಿಂದರಾಜು, ಉಪಾಧ್ಯಕ್ಷ ಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ಚಾಲಕ ಕಂ ನಿರ್ವಾಹಕ ಜಯದೇವ್‌ ಸೇರಿದಂತೆ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ