NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಮುಷ್ಕರ ಅನಿವಾರ್ಯ : ವಿಜಯ ಭಾಸ್ಕರ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬ ನಿಟ್ಟಿನಲ್ಲಿ ಹಕ್ಕೊತ್ತಾಯ ಮಂಡಿಸಲಾಗಿದೆ. ಬೇಡಿಕೆಗಳು ಈಡೇರದೇ ಹೋದಲ್ಲಿ ಮುಷ್ಕರ ನಡೆಸುವುದು ಅನಿವಾರವಾಗಲಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸದಸ್ಯ ವಿಜಯ ಭಾಸ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ನ.7ರಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಬೃಹತ್‌ ಸಮಾವೇಶವನ್ನು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಬಸವೇಶ್ವರ ನಗರದ ಗೋಕುಲ ರಸ್ತೆಯಲ್ಲಿರುವ ಡಾ.ಕೆ. ಎಸ್. ಶರ್ಮಾ ಸಭಾ ಭವನ ಆಯೋಜಿಸಿತ್ತು.

ಹುಬ್ಬಳ್ಳಿ ನಗರದ ಡಾ.ಕೆ. ಎಸ್. ಶರ್ಮಾ ಸಭಾ ಭವನದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಸಾರಿಗೆ ನೌಕರರು.

ಮೂಲ ವೇತನಕ್ಕೆ ಬಿಡಿಎ ವಿಲೀನಗೊಳಿಸಿ ಪರಿಷ್ಕೃತ ಮೂಲ ವೇತನದ ಶೇ.25 ಹೆಚ್ಚಳ ಮಾಡಿ ವೇತನ ಶ್ರೇಣಿ ಸಿದ್ದಪಡಿಸಬೇಕು. ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೆ ಮರು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಈ ಜಂಟಿ ಸಮಿತಿಯು ವಾಯವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ಗುತ್ತಿಗೆ ಪದ್ಧತಿಯ ಮೂಲಕ ಸಿಬ್ಬಂದಿಗಳನ್ನು ನೇಮಿಸುವುದನ್ನು ನಿಲ್ಲಿಸಬೇಕು. ನಿಗಮಗಳಿಗೆ ಸೇರಿರುವ 41 ಮಾರ್ಗಗಳನ್ನು ಖಾಸಗಿಯವರಿಗೆ ಕೊಡುವುದನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಇಂದು ಬೆಲೆ ಏರಿಕೆ ಮತ್ತಿತರ ಕಾರಣಗಳಿಂದ ಸಾರಿಗೆ ನಿಗಮಗಳ ನೌಕರರು ಜೀವನ ನಡೆಸುವುದೇ ಕಷ್ಟವಾಗಿದೆ. ನಾವು ನಮ್ಮ ಜಂಟಿ ಕ್ರಿಯಾ ಸಮಿತಿ ವತಿಯಿಂದ 10 ಅಂಶಗಳ ಬೇಡಿಕೆಗಳ ಪ್ರಣಾಳಿಕೆಯನ್ನು 08.08.2022 ರಂದು ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ಕೊಟ್ಟಿದ್ದೇವೆ. ವೇತನ, ಬಾಟ ಇತ್ಯಾದಿಗಳ ಹೆಚ್ಚಳ, ಉತ್ತಮ ವೈದ್ಯಕೀಯ ಸೌಲಭ್ಯ, ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿಗದಿ ಪಡಿಸುವುದು (ಫಾರಂ-4).

ಹುಬ್ಬಳ್ಳಿ ನಗರದ ಡಾ.ಕೆ. ಎಸ್. ಶರ್ಮಾ ಸಭಾ ಭವನದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಸಾರಿಗೆ ನೌಕರರು.

ಮಹಿಳಾ ನೌಕರರಿಗೆ ಸಂಬಂಧಪಟ್ಟ ಕೆಲವು ಬೇಡಿಕೆಗಳು, ಉತ್ತಮವಾದ ಪೆನ್ಶನ್, ಕೈಗಾರಿಕಾ ಒಪ್ಪಂದಗಳಂತೆ ಗ್ರಾಚ್ಯುಯಿಟಿ ಕೊಡುವುದು ಹಾಗೂ ಮುಷ್ಕರದ ಸಂದರ್ಭದಲ್ಲಿ ವಜಾ ಆಗಿರುವ ಎಲ್ಲ ನೌಕರರನ್ನು ಬೇಷರತ್ತಾಗಿ ಕೂಡಲೇ ಕೆಲಸಕ್ಕೆ ತೆಗೆದುಕೊಳ್ಳುವುದು ಮುಂತಾದ ಬೇಡಿಕೆಗಳ ಬಗ್ಗೆ ಕೆ.ಎಸ್.ಆರ್.ಟಿ.ಸಿ ಆಡಳಿತ ವರ್ಗಕ್ಕೆ ವಿವರವಾಗಿ ತಿಳಿಸಿದ್ದೇವೆ. ಆದರೆ ಈವರೆಗೂ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ.

ಹೀಗಾಗಿ ಮುಂದಿನ ದಿನದಲ್ಲಿ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ