NEWSನಮ್ಮರಾಜ್ಯಬೆಂಗಳೂರು

ಸಾರಿಗೆ ನೌಕರರ ಸಮಸ್ಯೆಯನ್ನು ಆಲಿಸಿ, ಮಹಿಳೆಯರಿಗೂ ಪಾಸ್‌ ಕೂಡ ಕೊಡುತ್ತೇವೆ: ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಮಗಳೂರು: ಚುನಾವಣೆ ವೇಳೆ ಪ್ರಣಾಳಿಕೆ ಬಿಡುಗಡೆ ಮಾಡಿರುವಂತೆ ನಾವು ರಾಜ್ಯದ ಮಹಿಳೆಯರಿಗೆ ಬಸ್‌ ಪಾಸ್‌ ಕೊಟ್ಟೆ ಕೊಡುತ್ತೇವೆ ಈ ಬಗ್ಗೆ ವಿಪಕ್ಷದವರು ತಾಳ್ಮೆಯಿಂದ ಇರಬೇಕು ಎಂದು ಮುಜರಾಯಿ ಇಲಾಖೆ ಮತು ಸಾರಿಗೆ ನೂತನ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣದ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಜೂನ್ 1 ರಂದು ಕ್ಯಾಬಿನೆಟ್‌ನಲ್ಲಿ ನಿರ್ಧಾರ ಆಗುತ್ತೆ. ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ e ಎಂದರು.

ವಿಪಕ್ಷದವರು ತಾಳ್ಮೆಯಿಂದ ಇರಲಿ. ಆದರೆ ಎಷ್ಟು ಜನ ಓಡಾಡ್ತಾರೆ ಅನ್ನೋ ಬಗ್ಗೆ ಮಾಹಿತಿ ಕೇಳಿದ್ದೇವೆ. ಸ್ಕೂಲ್ ಬಸ್ ಪಾಸ್‌ನಂತೆ ಮಹಿಳೆಯರ ಬಸ್‍ಪಾಸ್‍ಗೂ ಇಲಾಖೆಗಳಿಗೆ ಹಣ ಕೊಡ್ತೇವೆ ಎಂದರು.

ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಮಕ್ಕಳಿಗೆ ಬಸ್ ಪಾಸ್ ನಂತೆ ಮಹಿಳೆಯರ ಲೆಕ್ಕದಂತೆ ದುಡ್ಡು ಕೊಡಬೇಕಾಗುತ್ತದೆ. ವಿಪಕ್ಷದವರು ರಚನಾತ್ಮಕವಾಗಿ ಟೀಕೆ ಮಾಡಲಿ. ಒಟ್ಟಿನಲ್ಲಿ ಗ್ಯಾರಂಟಿ ಕೊಟ್ಟೆ ಕೊಡುತ್ತೇವೆ. ರಾಜ್ಯದ ಮಹಿಳೆಯರಿಗೆ ಮಾತ್ರ ಕೊಡುತ್ತೇವೆ ಅನ್ಯ ರಾಜ್ಯದ ಮಹಿಳೆಯರಿಗೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ, ಖಾತೆಗಳೂ ಶಾಶ್ವತವಲ್ಲ, ಹೀಗಾಗಿ ಯಾವ ಖಾತೆ ಕೊಟ್ಟಿದ್ದಾರೊ ಆ ಖಾತೆಯನ್ನು ಸಮರ್ಥವಾಗಿ ನಿಭಾಹಿಸಿಕೊಂಡು ಹೋಗಬೇಕು. ಅಸಮಾಧಾನ ಸಮಾಧಾನ ಎಂದು ಕುಳಿತರೆ ಕಾಲು ಮುಂದೋಗುತ್ತದೆ ಅಷ್ಟೆ ಎಂದು ಸಾರಿಗೆ ಖಾತೆ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದರು.

ನಾಲ್ಕೂವರೆ ವರ್ಷ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಿದ ಹಾಗೆ ಕೆಲಸ ಮಾಡ್ತೇನೆ. ಅಧಿಕಾರಿಗಳು ನೌಕರರ ವೇತನ ಸೇರಿದಂತೆ ಇತರ ಸಮಸ್ಯೆಗಳ ಬಗ್ಗೆ ನಾಲ್ಕು ಕಾರ್ಪೋರೇಷನ್ ಅಧಿಕಾರಿಗಳ ಜತೆ ಸಭೆ ಮಾಡಿ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು