NEWSನಮ್ಮರಾಜ್ಯಸಿನಿಪಥ

ಸರಳವಾಗಿ ನೆರವೇರಿತು ನಿಖಿಲ್ ಕುಮಾರಸ್ವಾಮಿ‌-ರೇವತಿ ವಿವಾಹ

ಮನೆಯಿಂದಲೇ ವಧು ವರರ ಆಶೀರ್ವದಿಸಿ ಎಂದು ಮನವಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ಲಾಕ್ ಡೌನ್ ಉಂಟಾಗಿರುವುದರಿಂದ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಅವರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಇಂದು ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು.

ಮಾಜಿ ಸಚಿವ ಎಂ. ಕೃಷ್ಣಪ್ಪ ಅವರ ಮೊಮ್ಮಗಳು ರೇವತಿಯನ್ನು ನಿಖಿಲ್ ಕುಮಾರಸ್ವಾಮಿ ಇಂದು (ಏ.17) ರಾಮನಗರದ ಅವರ ತೋಟದ ಮನೆಯಲ್ಲಿ ಎರಡೂ ಕುಟುಂಬಗಳ ಸುಮಾರು 50 ಜನರ ಸಮ್ಮುಖದಲ್ಲಿ  ವಿವಾಹವಾದರು. ಇದಕ್ಕಾಗಿ ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಮನೆಯಲ್ಲಿ ಚಪ್ಪರದ ಪೂಜೆ ಅರಿಶಿನ ಶಾಸ್ತ್ರ ನೆರವೇರಿತು. ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಮಗನಿಗೆ ಅರಿಶಿನದ ನೀರು ಹಾಕಿ ಆಶೀರ್ವದಿಸಿದರು.

ಅದ್ದೂರಿಯಾಗಿ ನೆರವೇರಿಸಲು ಆಯೋಜಿಸಿದ್ದ ನನ್ನ ಮಗನ ವಿವಾಹವನ್ನು ಸರಳವಾಗಿ 50-60 ಜನ ಆಪ್ತ ಬಂಧುಗಳ ಸಮ್ಮುಖದಲ್ಲಿ ಮಾಡಿದ್ದೇವೆ. ಕೊರೊನಾ ವೈರಸ್ ಲಾಕ್ ಡೌನ್‌ನಿಂದಾಗಿ ಸರ್ಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಪಾಲಿಸುವುದು ನಮಗೆ ಸದ್ಯಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಅಭಿಮಾನಿಗಳು, ಬೆಂಬಲಿಗರು ಯಾರೂ ಬೇಸರ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಭೀತಿಯಿಂದ ಅಂದುಕೊಂಡಂತೆ ವಿವಾಹ ನೆರವೇರಿಸಲು ಆಗಲಿಲ್ಲ ಎಂದು ಬೇಸರಗೊಂಡಿರುವ   ಕುಮಾರಸ್ವಾಮಿಯವರು ತಮ್ಮ ಅಭಿಮಾನಿಗಳನ್ನು ಆಹ್ವಾನಿಸಲಾಗದಿದ್ದಕ್ಕೆ ಕ್ಷಮೆ ಕೋರಿದ್ದಾರೆ.

ಕೊರೊನಾ ವೈರಸ್ ಸಮಸ್ಯೆಯೆಲ್ಲ ಮುಗಿದ ಮೇಲೆ ಎಲ್ಲರನ್ನೂ ಆಹ್ವಾನಿಸಿ ದೊಡ್ಡ ಔತಣಕೂಟ ಏರ್ಪಡಿಸುತ್ತೇವೆ. ನಾವು ಬೇರೆಯವರಿಗೆ ಮಾದರಿಯಾಗಬೇಕು. ಈ ಹಿನ್ನೆಲೆಯಲ್ಲಿ ನಿಯಮವನ್ನು ಸರಿಯಾಗಿ ಪಾಲಿಸುವುದು ಅನಿವಾರ್ಯವಾಗಿದೆ. ಇದಕ್ಕೆ ನಿಮ್ಮೆಲ್ಲರ ಬೆಂಬಲವು ಇದೆ ಎಂದು ನಂಬಿ ಈ ಕಾರ್ಯ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಒಂದು ಖುಷಿಯ ವಿಚಾರವೆಂದರೆ ರಾಮನಗರ ಜಿಲ್ಲೆ ಕೊರೊನಾ ವೈರಸ್‌ಗೆ ಹಸಿರು ವಲಯದಲ್ಲಿ ಬಂದಿರುವುದು. ಬೆಂಗಳೂರಿನ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಿರುವುದರಿಂದ ರಾಮನಗರ ತೋಟದ ಮನೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದರೆ ಬೇರೆಯವರಿಗೆ ಮಾದರಿಯಾಗುವುದು ಕಷ್ಟ. ಹೀಗಾಗಿ ಯಾರನ್ನು ಮದುವೆಗೆ ಕರೆಯಲಾಗಲಿಲ್ಲ ಆದ್ದರಿಂದ ನಮ್ಮ ಎಲ್ಲಾ ಅಭಿಮಾನಿಗಳು, ಬೆಂಬಲಿಗರು ಮನೆಯಿಂದಲೇ ತಮ್ಮ ಮಗನಿಗೆ ಹರಸಬೇಕೆಂದು ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ