NEWSನಮ್ಮರಾಜ್ಯಶಿಕ್ಷಣ-

ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ  ಬಿಡುಗಡೆ ಮಾಡಲಾಯಿತು.

ಹಿರಿಯ ಕವಿ ಹಾಗೂ ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ರಘುನಾಥ ಚ.ಹ ಹಾಗೂ ಬಿಬಿಎಂಪಿ ವಲಯ ಆಯುಕ್ತರು ಮತ್ತು ಯಲಹಂಕ ವಲಯದ ಕರೀಗೌಡ (ಐಎಎಸ್), ಕವಯಿತ್ರಿ ಜ.ನಾ.ವೇಜಶ್ರೀ ಮತ್ತಿತರರು ಗಣ್ಯರು ಬಿಡುಗಡೆಗೊಳಿಸಿದರು.

ಈ ವೇಳೆ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮಾತನಾಡಿ, ನಮ್ಮ ಭೂ ಮಾಪನ ಇಲಾಖೆಯ ಇತಿಹಾಸವು ಕನ್ನಡ ಸಾಹಿತ್ಯದಲ್ಲಿ ಹೆಚ್ಚೆಚ್ಚು ಬರಲೆಂದು ಆಶಿಸುತ್ತ, ಅನಿಲ ಅವರು ಬರೆದ ಕತೆಗಳು ಹಲವು ವಿಶ್ವವಿದ್ಯಾಲಯಗಳಿಗೆ ಪಠ್ಯವಾಗಿವೆ ಹಾಗೂ ಪ್ರತಿಷ್ಠಿತ ಬಹುಮಾನವನ್ನು ಪಡೆದಿರುವ ಅನಿಲ ಗುನ್ನಾಪೂರ ಅವರಂತಹ ಲೇಖಕರನ್ನು ಮತ್ತು ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಅಧ್ಯಕ್ಷತೆ ವಹಿಸಿದ ರಘುನಾಥ ಚ.ಹ. ಮಾತನಾಡಿ, ಇಂಡಿ ತಾಲೂಕಿನ ಲೇಖಕರು, ಪ್ರಸ್ತುತ ಬಾಗಲಕೋಟೆಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅನಿಲ್ ಗುನ್ನಾಪೂರ ಅವರ ಎರಡನೇ ಪುಸ್ತಕದಲ್ಲಿ ತಮ್ಮ ಅನುಭವಕ್ಕೆ ನಿಲುಕಿದ ಜೊತೆಯ ಜೀವಗಳ ಜೀವನವನ್ನು ಬೇರೆ ಜೀವಗಳಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿರುವುದು ಇದೊಂದು ವಿಶಿಷ್ಟವಾದದ್ದು, ಹಾಗೆ ಇನ್ನುಳಿದ ಕಥೆಗಳಲ್ಲೂ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಹಿಡಿದಿರುವರು ವಿಶೇಷವಾಗಿದೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಶೋಭಾ ಗುನ್ನಾಪುರ, ಹೈಕೋರ್ಟ್ ನ್ಯಾಯವಾದಿ ಸುನಿಲ್ ಗುನ್ನಾಪುರ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಾಹಿತ್ಯ ಆಸಕ್ತರು, ಮತ್ತಿತರು ಭಾಗವಹಿಸಿದ್ದರು.

ಫೋಟೋ ಕ್ಯಾಪ್ಶನ್: ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ಅನಿಲ್ ಗುನ್ನಾಪೂರ ಅವರ ‘ಸರ್ವೇ ನಂಬರ್-97’ ಪುಸ್ತಕವನ್ನು ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ರಘುನಾಥ ಚ.ಹ ಹಾಗೂ ಬಿಬಿಎಂಪಿ ವಲಯ ಆಯುಕ್ತ ಕರೀಗೌಡ (ಐಎಎಸ್), ಕವಯಿತ್ರಿ ಜ.ನಾ.ತೇಜಶ್ರೀ, ಲೇಖಕ ಅನಿಲ್ ಗುನ್ನಾಪುರ ಗಣ್ಯರು ಬಿಡುಗಡೆಗೊಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ