NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಅಧಿಕಾರಿಗಳ ಸಂಬಳದಲ್ಲೂ ಯಾವುದೇ ತಡೆಯಿಲ್ಲ ಎಂದು ಹೇಳಲಾಗಿದೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಲವು ರಾಜ್ಯಗಳ ಸರ್ಕಾರಗಳು ಈಗಾಗಲೇ ತಮ್ಮ ನೌಕರರು ಹಾಗೂ ಅಧಿಕಾರಿಗಳ ಸಂಬಳ ಕಟ್ ಮಾಡಿ ಆದೇಶ ಹೊರಡಿಸಿವೆ. ಆದರೂ ರಾಜ್ಯ ಸರ್ಕಾರ ಅಂತಹ ಚಿಂತನೆ ಮಾಡಿಲ್ಲ ಎಂದು ಹೇಳಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಆಗದೇ ನಿಗದಿತ ದಿನದಂದೇ ಕೊನೆಗೊಂಡರೇ ಏನೂ ತೊಂದರೆ ಇಲ್ಲ. ವಿಸ್ತರಣೆ ಆದಲ್ಲಿ ಸಂಬಳ ಕಡಿತದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂಬ ಆಲೋಚನಯಲ್ಲೂ ಮುಳುಗಿದೆ ಎನ್ನಲಾಗಿದೆ. ಆದರೆ, ಮುಂದಿನ ಪರಿಸ್ಥಿತಿಯನ್ನು ಅರಿತು ಎಚ್ಚರಿಕೆ ಹೆಜ್ಜೆ ಹಾಕಲು ತೀರ್ಮಾನಿಸಿದೆ.

ಏನೆ ಆದರೂ ಸದ್ಯದ ಈ ಮಟ್ಟಿಗಂತು ನೌಕರರ ಜೇಬಿಗೆ ಕತ್ತರಿ ಹಾಕುವಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ ಎಂದು ಹೇಳಲಾಗಿದೆ.

ಈಗಾಗಲೇ ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಾಸ್ಥಾನಗಳಲ್ಲಿ ಕೊರೋನಾ ತಂದಿರುವ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಮ್ಮ ನೌಕರರು ಮತ್ತು ಅಧಿಕಾರಿಗಳ ಜೇಬಿಗೆ ಭಾರಿ ಕೈಯನ್ನೇ ಹಾಕಿವೆ. ಮುಖ್ಯಮಂತ್ರಿಯಾದಿಯಾಗಿ ಎಲ್ಲ ಜನ ಪ್ರತಿನಿಧಿಗಳು ಆಡಳಿತ ಸೇವೆಯ ವಿವಿಧ ಇಲಾಖೆಯ ಅಧಿಕಾರಿಗಳು, ಎ,ಬಿ,ಸಿ ದರ್ಜೆ ನೌಕರರ ವೇತನವನ್ನು ಕಡಿತಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಅಂಥ ಯಾವುದೇ ಸ್ಥಿತಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.

 

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ