NEWSನಮ್ಮಜಿಲ್ಲೆನಮ್ಮರಾಜ್ಯ

ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು-ನೌಕರರಿಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಕೊಡುವ ಸಂಬಂಧ ಕಳೆದ 2020ಕ್ಕೂ ಹಿಂದೆಯೇ ಅಂದಿನ ಸರ್ಕಾರ ನಿರ್ಧರಿಸಿತ್ತು. ಆದರೆ, ಅಂದಿನ ಬಿಜೆಪಿ ಸರ್ಕಾರದ ಮತ್ತು ನಿಗಮ ಮಂಡಳಿಗಳ ದಾರಿ ತಪ್ಪಿಸಿ ಇಲ್ಲ ಅಗ್ರಿಮೆಂಟ್‌ ಮಾಡಿದರೆ ನಿಮಗೆ ಈ ರೀತಿ ಲಾಭವಾಗುತ್ತದೆ ಎಂದು ಕಿವಿವೂದಿ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರ ದಾರಿ ತಪ್ಪಿಸಿದ್ದರು ಕೆಲ ಸಂಘಟನೆಗಳ ಮುಖಂಡರು.

ಸರ್ಕಾರದ ಪ್ರತಿನಿಧಿಯಾಗಿ ಅಂದಿನ ಸಾರಿಗೆ ಸಚಿವರೇ ನಿಮ್ಮನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಆದರೆ, ವೇತನ ಆಯೋಗದಂತೆ ವೇತನ ನೀಡುವ ಮೂಲಕ ನಿಮಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ್ದರು.

ಆದರೆ, ಆ ಭರವಸೆಯನ್ನು ಅಂದಿನ ಸರ್ಕಾರ ಈಡೇರಿಸಲೇ ಇಲ್ಲ. ಈಗ ಸರ್ಕಾರ ಬದಲಾಗಿದ್ದು ರಾಜ್ಯದಲ್ಲಿ ಇರುವ ಕಾಂಗ್ರೆಸ್‌ ಸರ್ಕಾರ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಕೊಡುವುದಾಗಿ ಘೋಷಣೆ ಮಾಡಿದೆ. ಆದರೆ ಈಗಲೂ ಕೂಡ ಕೆಲ ಮುಖಂಡರು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ.

ಈಗ ವೇತನ ಆಯೋಗದಂತೆ ನಮಗೆ ಸರಿ ಸಮಾನ ವೇತನ ಬೇಕೇಬೇಕು ಎಂದು ಸಮಸ್ತ ಸಾರಿಗೆ ಅಧಿಕಾರಿಗಳು- ನೌಕರರು ಈಗಾಗಲೇ ಸಂಬಂಧಟ್ಟ ಸಚಿವರು ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಸಲ್ಲಿಸಿದ್ದಾರೆ. ಆದರೆ, ಅಳವಡಿಸುವುದಕ್ಕೆ ಅಡ್ಡಗಾಲು ಹಾಕುತ್ತಿರುವವರು ಈವರೆಗೂ ಅಧಿಕಾರಿಗಳು- ನೌಕರರ ಅಭಿಪ್ರಾಯವನ್ನೇ ಸಂಗ್ರಹಿಸಿಲ್ಲ. ಹೀಗಾಗಿ ಸರ್ಕಾರ ಕೂಡ ಅವರ ಬೇಡಿಕೆಗೆ ಸ್ಪಂದಿಸುತ್ತಿಲ್ಲ.

ಇನ್ನು ಅದನ್ನು ಬಿಡಿ ವೇತನ ಆಯೋಗ ಮಾದರಿ ಬೇಡ ಅಗ್ರಿಮೆಂಟ್‌ ಮೂಲಕವೇ ನಾವು ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನವನ್ನು ನಿಮಗೆ ಕೊಡಿಸಿಯೇ ತೀರುತ್ತೇವೆ ಇದಕ್ಕೆ ನಾವು ಬದ್ಧ ಎಂದು ಹೇಳುವ ಸಂಘಟನೆಯ ಮುಖಂಡರು ಯಾರಾದರೂ ಇದ್ದಾರೆಯೇ? ಇಲ್ಲ ಅವರು ಶೇ.25ರಷ್ಟು ವೇತನ ಹೆಚ್ಚಳ ಮಾಡಲು ಶಿಫಾರಸು ಮಾಡಿರುವುದಾಗಿದೆ ಮೀಡಿಯಾಗಳ ಮುಂದೆ ಹೇಳಿಕೆ ನೀಡುತ್ತಿದ್ದಾರೆ ಅಷ್ಟೆ.

ಅಂದರೆ ಕೆಲ ಮುಖಂಡರಿಗೆ ಸಾರಿಗೆ ಅಧಿಕಾರಿಗಳು-ನೌಕರರು ಒಳ್ಳೆ ವೇತನ ಪಡೆಯುವುದು ಸ್ವಲ್ಪವೂ ಇಷ್ಟವಿಲ್ಲ. ಏಕೆಂದರೆ ನೌಕರರು ಒಳ್ಳೆ ವೇತನ ಪಡೆದರೆ ನಮ್ಮ ಸಂಘಟನೆಗಳ ಜತೆ ಸೇರುವುದಿಲ್ಲ ಜತೆಗೆ ಅಧಿಕಾರಿಗಳು – ನೌಕರರಲ್ಲಿ ಒಳ್ಳೆಯ ಬಾಂಧವ್ಯ ವೃದ್ಧಿಯಾಗಿ ಸರ್ಕಾರದ ಮಟ್ಟದಲ್ಲಿ ಅವರೇ ಮಾತನಾಡಿಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಂಡು ಬಿಡುತ್ತಾರೆ ಎಂಬ ಭಯ.

ಇಂಥವರ ಮಾತಿನಲ್ಲಿರುವ ವಿಷವನ್ನು ಅರಿಯದ ಮುಗ್ದ ಸಾರಿಗೆ ನೌಕರರು ಇವರನ್ನು ನಂಬಿ ಸರ್ಕಾರಿ ನೌಕರರಿಗಿಂತ ಹೆಚ್ಚು ವೇತನ ಪಡೆಯುತ್ತಿದ್ದವರು ಈಗ ಅವರಿಗಿಂತ ಶೇ.32-41ರಷ್ಟು ಕಡಿಮೆ ಪಡೆಯುವ ಹಂತಕ್ಕೆ ಬಂದು ನಿಂತಿದ್ದಾರೆ. ಇಷ್ಟೆಲ್ಲ ನೌಕರರಿಗೆ ಮೋಸ ಮಾಡಿರುವುದು ಗೊತ್ತಿದ್ದರೂ ಕೂಡ ಈಗಲೂ ನಾವು ನೌಕರರ ಪರ ಇದ್ದೇವೆ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ನಂಬಿಸುವ ನಾಟಕವಾಡುತ್ತಿದ್ದಾರೆ.

ಇನ್ನು ಸರಿ ಸಮಾನ ವೇತನ ಕೊಡಿಸುವುದಕ್ಕೆ ನಮ್ಮ ಕೈಯಲ್ಲಿ ಆಗುವುದಿಲ್ಲ ಆದರೆ ಅದಕ್ಕಿಂತ ಹೆಚ್ಚಿಗೆ ಕೊಡಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಅಧಿಕಾರಿಗಳು-ನೌಕರರು ಮಾತ್ರ ನಮಗೆ ನೀವು ಹೆಚ್ಚು ವೇತನ ಕೊಡಿಸುವುದು ಬೇಡ ಸರಿ ಸಮಾನ ವೇತನ ಕೊಡಿಸಿ ಸಾಕು ಎಂದು ಹೇಳಿದ್ದಾರೆ.

ಆದರೆ, ಆ ನೌಕರರ ಬೇಡಿಕೆಯನ್ನು ಕೇಳಿಸಿಕೊಳ್ಳದೆ ಮಧ್ಯೆಮಧ್ಯೆ ಮೂಗುತೂರಿಸಿಕೊಂಡು ಬರುತ್ತಿದ್ದಾರೆ. ಇದು ಅಧಿಕಾರಿಗಳಿಗೆ-ನೌಕರರಿಗೆ ಸ್ವಲ್ಪವು ಇಷ್ಟವಾಗುತ್ತಿಲ್ಲ. ಜತೆಗೆ ಈಗ ಬಹುತೇಕ ಅಧಿಕಾರಿಗಳಿಗೂ ಕೂಡ ಅವರು ಹಿಂದೆ ಮಾಡಿದ ತಪ್ಪಿನ ಅರಿವಾಗಿದೆ.

ಈ ನಡುವೆ ಅಧಿಕಾರಿಗಳು ಬರದಿದ್ದರೆ ನಾವು ಯಾವುದೇ ಕಾರಣಕ್ಕೂ ಹೋರಾಟಕ್ಕೆ ಇಳಿಯಬಾರದು ಎಂಬ ತಿಳಿವಳಿಕೆಯೂ ಬಹುತೇಕ ನೌಕರರಿಗೆ ಬಂದಿದೆ. ಆದ್ದರಿಂದ ನಿಮ್ಮ ತಂತ್ರ ಕುತಂತ್ರ ಈಗ ನಡೆಯುವುದಿಲ್ಲ. ನಿಮ್ಮ ಹೋರಾಟ ಸತ್ಯವಾಗಿದ್ದರೆ ಅದನ್ನು ಅಧಿಕಾರಿಗಳು ನೌಕರರಿಗೆ ತಿಳಿಸಿ ನಂತರ ಅವರ ಬೆಂಬಲದಿಂದ ಮುನ್ನುಗ್ಗಿ ಇಲ್ಲದಿದ್ದರೆ ಅವರ ಮುಂದೆ ನೀವು ಚಿಕ್ಕವರಾಗುತ್ತೀರಿ ಇದು ನಿಮಗೆ ಬೇಕಾ ಪ್ರಶ್ನಿಸಿಕೊಳ್ಳಿ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ