NEWSದೇಶ-ವಿದೇಶ

ಸೊಲೊಮನ್ ದ್ವೀಪಗಳಲ್ಲಿ 7.3ರ ತೀವ್ರತೆಯ ಭೂಕಂಪ: 300 ಕಿಮೀಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬಾಲಿ: ಸೊಲೊಮನ್ ದ್ವೀಪಗಳಲ್ಲಿ ಮಂಗಳವಾರ (ನ 22) ಮಧ್ಯಾಹ್ನ 1 ಗಂಟೆಗೆ (ಭಾರತೀಯ ಕಾಲಮಾನ ಬೆಳಗ್ಗೆ 7 ಗಂಟೆ) ಪ್ರಬಲ ಭೂಕಂಪ ಸಂಭವಿಸಿದ್ದು, ದ್ವೀಪಗಳ ಸುತ್ತಮುತ್ತಲ 300 ಕಿಮೀ ವ್ಯಾಪ್ತಿಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಶಾಂತಸಾಗರದ ಸುನಾಮಿ ಮುನ್ನೆಚ್ಚರಿಕಾ ಕೇಂದ್ರ ಎಚ್ಚರಿಕೆ ನೀಡಿದೆ.

ಭೂ ಮೇಲ್ಮೈಯಿಂದ 15 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ ಹೇಳಿದರೆ, ದ್ವೀಪಗಳ ಸುತ್ತಮುತ್ತಲ 300 ಕಿಮೀ ವ್ಯಾಪ್ತಿಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು Pacific Tsunami Warning Centre ಎಚ್ಚರಿಕೆ ನೀಡಿದೆ.

ಆಸ್ಟ್ರೇಲಿಯಾದ ಪೂರ್ವ ತೀರದಲ್ಲಿ 3.2 ತೀವ್ರತೆಯ ಭೂಕಂಪವು ಮಂಗಳವಾರ ನಸುಕಿನಲ್ಲಿ ವರದಿಯಾಗಿತ್ತು. ಜನಪ್ರಿಯ ಪ್ರವಾಸಿ ತಾಣವಾಗಿರುವ ಬಾಟೆಮನ್ಸ್​ ಬೇ ಸಮೀಪದ ಸಮುದ್ರ ತೀರದಲ್ಲಿ ಈ ಭೂಕಂಪನದ ಕೇಂದ್ರವಿತ್ತು ಎಂದು ಜಿಯೊಸೈನ್ಸ್ ಆಸ್ಟ್ರೇಲಿಯಾ ಹೇಳಿದೆ. ಈ ಭೂಕಂಪನದ ಕೇಂದ್ರವು ಭೂಗರ್ಭದ 10 ಕಿಮೀ ಆಳದಲ್ಲಿತ್ತು.

ಇಂಡೋನೇಷ್ಯಾದ ಪಶ್ಚಿಮ ಜಾವಾ ನಗರದಲ್ಲಿ ಸೋಮವಾರ ಸಂಭವಿಸಿದ್ದ 5.6 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಇತರ ನೂರಾರು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಈ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಇಸ್ಲಾಮಿಕ್ ವಸತಿ ಶಾಲೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದೆ. ಈ ಬಗ್ಗೆ ಒಂದು ವಿಡಿಯೋ ಸಂದೇಶವನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಸಿಯಾಂಜೂರ್‌ನಲ್ಲಿ ಭೂಕುಸಿತದಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಆದರೆ ಇನ್ನೊಬ್ಬ ವ್ಯಕ್ತಿ ಅಸುನೀಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಒಬ್ಬ ಮಹಿಳೆ ಮತ್ತು ಮಗುವನ್ನು ರಕ್ಷಿಸಿ ಸ್ಥಳಾಂತರಿಸಿದ್ದೇವೆ ಎಂದು ಸಿಯಾಂಜೂರ್ ಪೊಲೀಸ್ ಮುಖ್ಯಸ್ಥ ಡೋನಿ ಹೆರ್ಮಾವಾನ್ ಬ್ರಾಡ್‌ಕಾಸ್ಟರ್ ಮೆಟ್ರೋ ಟಿವಿಗೆ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ