NEWSಕೃಷಿನಮ್ಮರಾಜ್ಯ

ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌

ಸಾಲುಮರದ ತಿಮ್ಮಕ್ಕನ 113ನೇ ವರ್ಷದ ಜನ್ಮದಿನದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಸ್ವಾರ್ಥವಿಲ್ಲದೇ ಮರಗಳನ್ನೆ ಮಕ್ಕಳೆಂದು ಭಾವಿಸಿ ಮನುಕುಲವನ್ನು ರಕ್ಷಿಸುವ ಬಹುದೊಡ್ಡ ಕೆಲಸವನ್ನು ಸಾಲುಮರದ ತಿಮ್ಮಕ್ಕನವರು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ವಸಂತನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ವೃಕ್ಷಮಾತೆ, ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ವರ್ಷದ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ‘ನ್ಯಾಷನಲ್ ಗ್ರೀನರಿ ಅವಾರ್ಡ್’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಬಳಿಕ ದೇಶದಾದ್ಯಂತ ನಡೆಯುವ ‘ಮಹಾವೃಕ್ಷ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಳೆ‌ ಬರಬೇಕಾದ ಸಂದರ್ಭಕ್ಕೆ ಬರುತ್ತಿಲ್ಲ‌. ಒಂದು ಭಾಗದಲ್ಲಿ ಮಳೆಯಾದರೆ, ಮತ್ತೊಂದು ಭಾಗದಲ್ಲಿ ಮಳೆಯಾಗುತ್ತಿಲ್ಲ. ಭೂಮಿಯ ಹಸಿರು ಪದರು ಕಡಿಮೆಯಾಗಿರುವುದೇ ಕಾರಣ. ಭಾರತದಲ್ಲಿ 21.7 ಹಸಿರು ಪದರ ಇದೆ. ಕರ್ನಾಟಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಇದರಿಂದ ಭೂಮಿಯ ಉಷ್ಣಾಂಶ ಹೆಚ್ಚಾಗುತ್ತಿದೆ. ಇದರ ಪರಿಣಾಮ ಕೋಟ್ಯಂತರ ಕೀಟಗಳು ನಾಶವಾಗುತ್ತಿವೆ. ಕೀಟಗಳು ನಾಶವಾದರೆ ಮನುಕುಲಕ್ಕೆ ಅಪಾಯ ಎದುರಾಗಲಿದೆ ಎಂದರು.

ಬಹುತೇಕ ದೇಶಗಳಲ್ಲಿ ಅಗ್ನಿ ಅವಘಡದಿಂದ ಕಾಡು ನಾಶವಾಗಿದೆ. ಅರಣ್ಯ ಭೂಮಿ ಕ್ಷೀಣಿಸುತ್ತಿದೆ. ಇದು ಮನುಕುಲಕ್ಕೆ ಅಪಾಯಕಾರಿ. ತಾಯಿ ಸಾಲುಮರದ ತಿಮ್ಮಕ್ಕನಿಗೆ ಇದ್ಯಾವುದರ ಬಗ್ಗೆಯೂ ಗೊತ್ತಿಲ್ಲ. ಆದರೂ ಮರಗಳನ್ನು ಮಕ್ಕಳೆಂದು ಭಾವಿಸಿ ಬೆಳೆಸುವ ಮುಖೇನ ಮನುಕುಲವನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಅವರ ಸಾಧನೆಯನ್ನು ಎಷ್ಟು ಶ್ಲಾಘಿಸಿದರು ಸಾಲುವುದಿಲ್ಲ ಎಂದು ಹೇಳಿದರು.

ಆಕೆಯ ಹುಟ್ಟುಹಬ್ಬ ನಿಮಿತ್ತ ಮಾತ್ರ. ಈ ಕಾರ್ಯಕ್ರಮದಿಂದ ಪರಿಸರ ಸಂರಕ್ಷಣೆಯ ಸಂದೇಶ ಎಲ್ಲೆಡೆ ಹೋಗಬೇಕು. ಇಂತಹ ಕಾರ್ಯಕ್ರಮಗಳನ್ನು ಸರ್ಕಾರ ಎಂದಿಗೂ ಸಹ ಇಂತಹ ಪ್ರೋತ್ಸಾಹಿಸಿದೆ. ತಿಮ್ಮಕ್ಕನವರ ಸೇವೆ ಮಾಡುವ ಪುಣ್ಯ ನಮಗೆ ಸಿಕ್ಕಿರುವುದೇ ಪುಣ್ಯ. ಅವರ ಕಾಲಮಾನದಲ್ಲಿ ನಾವಿರುವುದೇ ಸಂತೋಷದಾಯಕ ವಿಷಯ. ಹಾಗಾಗಿ ನಾನು ಸಹ ಸಾಲುಮರದ ತಿಮ್ಮಕ್ಕನವರ ಮಗ ಉಮೇಶ ಅವರ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗದ ಭೋವಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಖ್ಯಾತ ವೈದ್ಯ ಡಾ. ರಮಣರಾವ್, ಅಪೋಲೋ ಆಸ್ಪತ್ರೆ ಮುಖ್ಯಸ್ಥ ಡಾ. ಗೋವಿಂದಯ್ಯ ಯತೀಶ್, ಡಾ. ರಜನಿ ಸುರೇಂದರ್ ಭಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್