ಆರೋಗ್ಯದೇಶ-ವಿದೇಶನಮ್ಮಜಿಲ್ಲೆ

ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ: ಹೋಟೆಲ್‌ ಮಾಲೀಕರಿಗೆ ಡಿಸಿ ಸಲಹೆ

ವಿದೇಶಗಳಿಂದ ಬಂದವರು ಸ್ವಯಂ ವರದಿ l ಜನತಾ ಕಫ್ರ್ಯೂ ಯಶಸ್ವಿಗೊಳಿಸಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ವೈರಸ್  ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್, ಖಾನಾವಳಿ, ರೆಸ್ಟೊರೆಂಟ್‍ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾಲೀಕರು ಮತ್ತು ನಿರ್ವಾಹಕರು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು  ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲಸಗಾರರು ಶುಚಿತ್ವದಿಂದ ಗ್ರಾಹಕರಿಗೆ ಸೇವೆ ನೀಡುವುದನ್ನು ಮಾಲೀಕರು ಖಚಿತಪಡಿಸಿಕೊಳ್ಳಬೇಕು. ಎಂದರು.

ವಿದೇಶಗಳಿಂದ ಜಿಲ್ಲೆಗೆ ಆಗಮಿಸುವ ಜನರು ಸ್ವಯಂ ಪ್ರೇರಿತರಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ವರದಿ ಮಾಡಿಕೊಳ್ಳಬೇಕು. ಮನೆಗಳಲ್ಲಿ ಪ್ರತ್ಯೇಕವಾಗಿ ನಿಗಾ ಇರಿಸಲ್ಪಟ್ಟಿರುವವರು ತಮ್ಮ ಪ್ರತ್ಯೇಕತೆಯನ್ನು

ಅನುಸರಿಸಬೇಕು. ಸರ್ಕಾರದ ನಿರ್ದೇಶನ ಉಲ್ಲಂಘಿಸಿದರೆ ಎಪಿಡೆಮಿಕ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಕೊರೊನಾ ವಿರುದ್ಧ ಜನಾಂದೋಲನ ರೂಪಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನಜಾಗೃತಿಗಾಗಿ ಕರೆ ನೀಡಿರುವ ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಬೇಕು. ಸಾರ್ವಜನಿಕರು ಅಂದು ಸ್ವಇಚ್ಛೆಯಿಂದ ಮನೆಗಳಿಂದ ಹೊರಬರದೇ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದು ತಿಳಿಸಿದರು.

ಹೋಟೆಲ್‍ಗಳು ಹಾಗೂ ಊಟ -ಉಪಾಹಾರ ಪೂರೈಸುವ ಎಲ್ಲಾ ವ್ಯಾಪಾರಿಗಳು ಶುಚಿತ್ವಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಅಡುಗೆ ತಯಾರಿಕೆ, ಬಳಸುವ ಪಾತ್ರೆಗಳು, ನೀರು, ಪದಾರ್ಥಗಳು, ಕೆಲಸಗಾರರು ಮುಂತಾದ ಎಲ್ಲ ವಿಷಯಗಳಲ್ಲಿ ಎಚ್ಚರ ವಹಿಸಿ ಗ್ರಾಹಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೇವೆ ನೀಡಬೇಕು. ಪಾತ್ರೆ ತೊಳೆಯಲು ಬಿಸಿನೀರು ಬಳಸಬೇಕು. ಗ್ರಾಹಕರಿಗೆ ಕುಡಿಯಲು ಪ್ರತ್ಯೇಕವಾಗಿ ಬಿಸಿನೀರು ಕೊಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ವಿಚಕ್ಷಣೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಗೆ ವಿದೇಶಗಳಿಂದ ಆಗಮಿಸುವ ನಾಗರಿಕರು ಸ್ವಯಂ ಪ್ರೇರಿತರಾಗಿ ಜಿಲ್ಲಾಡಳಿತಕ್ಕೆ ತಮ್ಮ ಪ್ರವಾಸದ ಹಿನ್ನೆಲೆ ಮತ್ತು ಆರೋಗ್ಯದ ಬಗ್ಗೆ ಜಿಲ್ಲಾಡಳಿತಕ್ಕೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಒದಗಿಸಬೇಕು. ಈಗಾಗಲೇ ಮನೆಗಳಲ್ಲಿ ಪ್ರತ್ಯೇಕವಾಗಿ ನಿಗಾ ಇರಿಸಲ್ಪಟ್ಟವರು ಯಾವುದೇ ಕಾರಣಕ್ಕೂ ತಮ್ಮ ಕುಟುಂಬದ ಇತರ ಸದಸ್ಯರು ಹಾಗೂ ನೆರೆ ಹೊರೆಯವರೊಂದಿಗೆ ಸಂಪರ್ಕಕ್ಕೆ ಬರಬಾರದು. ಈ ವಿಷಯದಲ್ಲಿ ಸರ್ಕಾರದ ನಿರ್ದೇಶನ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಎಪಿಡೆಮಿಕ್ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದರು.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ