ಸಾಹಿತ್ಯ ಲೋಕದ ಹಿರಿಯ ಕೊಂಡಿ ಚಂದ್ರಕಾಂತ ಕುಸನೂರ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ (90) ಅವರು ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ಕನ್ನಡದ ಸಾಹಿತ್ಯ ಲೋಕದ ಖ್ಯಾತ ಕೊಂಡಿಯೊಂದನ್ನು ಕಳೆದುಕೊಂಡಂತ್ತಾಗಿದ್ದು, ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳಾಗಿದ್ದು, ರಂಗಕರ್ಮಿಗಳಾಗಿಯೂ ಗುರುತಿಸಿಕೊಂಡಿದ್ದರು. 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.

ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರಗಿಯಲ್ಲಿ “ರಂಗ ಮಾಧ್ಯಮ”ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.

1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.1992 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ. 2006ನೆಯ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.

ಮೃತರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಸಿಎಂ ಯಡಿಯೂರಪ್ಪ, ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಸಾಹಿತ್ಯ ಲೋಕದ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!