NEWSಆರೋಗ್ಯನಮ್ಮಜಿಲ್ಲೆ

ಸಾಂಕ್ರಾಮಿಕ ರೋಗಗಳ ತಡೆಗೆ ಮುಂದಾದ ಜಲಮಂಡಲಿ

ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ  ಬೆಂಗಳೂರು ಜಲಮಂಡಳಿ ವತಿಯಿಂದ ತೀವ್ರ ನಿಗವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು  ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿ  ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ ಪ್ರವೃತವಾಗುತ್ತಿದೆ ಎಂದು ಹೇಳಿದ್ದಾರೆ.

ಕಾಲರಾ ಮತ್ತು ಜಿ.ಇ. ಗೆ ಸಂಬಂಧಿಸಿದ ಮಾಹಿತಿಯನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ(Health & Family WelfareDepartment, Government Epidemic Disease Hospital, Bangalore) ಯಿಂದ ಮಾ.18, 19 ರಂದು ನೋಂದಣಿಯಾದ ಪ್ರಕರಣಗಳ ವಿಳಾಸವನ್ನು ಪಡೆದು  ಅಂತಹ ಸ್ಥಳಗಳಿಂದ ನೀರಿನ ಮಾದರಿಯನ್ನು ಸಂಗ್ರಹಿ, ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾ.18, 19 ರವರೆಗೆ ದಾಖಲುಗೊಂಡ ಒಟ್ಟು 10 ಪ್ರಕರಣಗಳಲ್ಲಿ 4 ಪ್ರಕರಣಗಳಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಅಂದು ನೀರು ಸರಬರಾಜು ಇಲ್ಲದ ಕಾರಣ ನೀರಿನ ಮಾದರಿಯನ್ನು ಸಂಗ್ರಹಿಸಿಲ್ಲ.  2 ಪ್ರಕರಣಗಳಿಗೆ ಸಂಬಂಧಿಸಿದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ನೀಡಲಾಗಿದ್ದು, ಫಲಿತಾಂಶ ನಿರೀಕ್ಷಣೆಯಲ್ಲಿದೆ.  ಉಳಿದ 4 ಪ್ರಕರಣಗಳು ಜಲ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿ ಎಂದು ಸ್ಪಷ್ಟಪಡಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ