ವಿಡಿಯೋ

ಸಾಂಪ್ರದಾಯಿಕವಾಗಿ ಜರುಗಿದ ನಂಜುಂಡೇಶ್ವರ ಸ್ವಾಮಿ ಮಿನಿ ರಥೋತ್ಸವ

ಕೊರೊನಾ ಭೀತಿ ಹಿನ್ನೆಲೆ ಕೇವಲ ಐದು ಮಂದಿ ಭಕ್ತರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು: ಇಂದು ನಡೆಯಬೇಕಿದ್ದ ನಂಜನಗೂಡಿನ ನಂಜುಂಡೇಶ್ವರ  ದೇವಾಲಯದ ಪಂಚ ಮಹಾರಥೋತ್ಸವ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರದ್ದಾಗಿದೆ.

ಆದರೂ ದೇವಾಲಯದ ಒಳಗೆ ಆಡಳಿತ ಮಂಡಳಿಯವರು ಸಾಂಪ್ರದಾಯಿಕವಾಗಿ ಶ್ರೀಸ್ವಾಮಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ್ದರು. ಹೀಗಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ಶನಿವಾರ ನೆರವೇರಿಸಲಾಯಿತು.

ದೊಡ್ಡ ತೇರಿನ ಬದಲು ಪುಟಾಣಿ ತೇರಿನ ಮೂಲಕ ರಥೋತ್ಸವ ನಡೆಸಲಾಯಿತು. ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸೇರುವ ಜಾಗದಲ್ಲಿ‌ ಕೇವಲ‌ 5 ಜನರು ಇದ್ದರು. ಈ ಹಿನ್ನೆಲೆಯಲ್ಲಿ ಅರ್ಚಕರು, ಕೆಲವು ಸಿಬ್ಬಂದಿ ಸೇರಿ ಸರಳ ಆಚರಣೆ ಮಾಡಿದರು.

ಮುಂಜಾನೆ 5.30ಕ್ಕೆ ದೇವಸ್ಥಾನದ ಹೊರ ಭಾಗದಲ್ಲಿ‌ ಪೂಜೆ ಸಲ್ಲಿಸಿ ರಥೋತ್ಸವ್ಕೆ ಚಾಲನೆ ನೀಡಲಾಯಿತು. ದೇವಾಲಯದ ಒಳ ಆವರಣದಲ್ಲೇ ಪುಟ್ಟ ರಥದಲ್ಲಿ ಉತ್ಸವ ಮೂರ್ತಿ ಪೂಜೆ ನಡೆಯಿತು.

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ ನಂಜನಗೂಡು ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಸರ್ಕಾರದ ವತಿಯಿಂದ ನಡೆಯುತ್ತಿದ್ದ ಗೌತಮ ಪಂಚ ರಥೋತ್ಸವ ರದ್ದಾಗಿದ್ದರಿಂದ ನಂಜನಗೂಡು ಯುವ ಬ್ರಿಗೇಡ್ ಯುವಕರು ಚಿಕ್ಕ ತೇರು ನಿರ್ಮಿಸಿ ದೇವಸ್ಥಾನದ ಸುತ್ತ ಎಳೆದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...