NEWSಆರೋಗ್ಯನಮ್ಮರಾಜ್ಯ

ಸಿಎಂ ಫೋನ್‌ ಕರೆಗೆ ಸ್ಪಂದಿಸಿ ಮಹಿಳೆಗೆ ಕ್ಯಾನ್ಸರ್ ಚಿಕಿತ್ಸೆ

ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಕುಡಚಿ ಮಹಿಳೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್ 19 ರ ಲಾಕ್ ಡೌನ್ ಹಿನ್ನೆಲೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ಬೆಳಗಾವಿ ಜಿಲ್ಲೆ ಕುಡಚಿಯ 50 ವರ್ಷದ ಮಹಿಳೆಯೊಬ್ಬರ ನೋವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಂದಿಸಿದ್ದಾರೆ.

ಕುಡಚಿಯ ಮಹಿಳೆಯ ತೊಂದರೆ ಗಮನಕ್ಕೆ ಬಂದ ತಕ್ಷಣ ಭಾನುವಾರ ರಾತ್ರಿ 8 ಗಂಟೆಯ ಹೊತ್ತಿಗೆ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು , ಮಹಿಳೆಯ ಚಿಕಿತ್ಸೆಗೆ ಏರ್ಪಾಡು ಮಾಡಲು ಸೂಚಿಸಿದರು.

ತಕ್ಷಣ ಕಾರ್ಯಪ್ರವೃತ್ತರಾದ ಡಿ ಎಚ್ ಓ ಹುಬ್ಬಳ್ಳಿ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಸಂಶೋಧನಾ ಕೇಂದ್ರದ ಆಡಳಿತ ಮಂಡಳಿ ಸಂಪರ್ಕಿಸಿ ಇಂದು( ಏ.13) ಚಿಕಿತ್ಸೆಗೆ ಸಮಯ ನಿಗದಿಪಡಿಸಿಕೊಟ್ಟಿದ್ದಾರೆ.

ಕೊರೊನಾ ನಿಯಂತ್ರಣದ ಕಾರ್ಯದೊತ್ತಡದ ನಡುವೆಯೂ ಸ್ಪಂದಿಸಿರುವ ಮುಖ್ಯಮಂತ್ರಿಗಳ ನಡೆ ಮಾನವೀಯತೆಗೆ ದ್ಯೋತಕವಾಗಿದೆ. ಇದು ಸಿಎಂ ಯಡಿಯೂರಪ್ಪ ಅವರ ಜನಪರಕಾಳಜಿಯನ್ನು ತೋರುತ್ತದೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ