NEWSಸಿನಿಪಥ

ಸುಧಾಮೂರ್ತಿಗೆ ಟೆಲಿವಿಷನ್ ಅಸೋಸಿಯೇಷನ್ ಋಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆ ಬಿಟ್ಟು ಹೊರ ಹೋಗದಂತಹ ಪರಿಸ್ಥಿತಿ. ಇದರಿಂದ ನಿತ್ಯಜೀವನ ನಡೆಸೋದು ತುಂಬ ಕಷ್ಟದ ಸಮಯವಾಗಿದೆ. ಇನ್ನು  ಮೇ 3 ರ ತನಕ ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು ಅದು ನಾಡಿದ್ದು ಅಂತ್ಯ ಕಾಣಲಿದೆಯಾ ಎಂದು ಇನ್ನು ಕೂಡಾ ಸ್ಪಷ್ಟ ಆಗಿಲ್ಲ.

ಈ ನಡುವೆ ಶೂಟಿಂಗ್ ನಿಂತಿರುವ ಕಾರಣ ಕಿರುತೆರೆ ಕಲಾವಿದರು, ತಂತ್ರಜ್ಞರು ಕೆಲಸವಿಲ್ಲದೇ ಮನೆಯಲ್ಲಿಯೇ ಕುಳಿತಿದ್ದಾರೆ. ಇದರಿಂದ ಕಲಾವಿದರು ನಿತ್ಯ ಜೀವನ ಸಾಗಿಸಲು ತುಂಬ ತೊಂದರೆ ಪಡುತ್ತಿದ್ದಾರೆ. ಅದನ್ನು ಅರಿತ ದಾನಿಗಳು ನೆರವಿಗೆ ಬಂದಿದ್ದು ಸ್ವಲ್ಪಮಟ್ಟಿಗೆ ನೆರವಿನ ಹಸ್ತಚಾಚಿದ್ದಾರೆ.

ಒಂದೆರಡು ದಿನಗಳ ಕಾಲ ಕೆಲಸವಿಲ್ಲದೇ ಕೂರಬಹುದು, ಕಡೇ ಪಕ್ಷ ಒಂದು ವಾರ ಕಳೆಯಬಹುದು, ಆದರೆ ತಿಂಗಳುಗಟ್ಟಲೇ ಮನೆಯಲ್ಲಿ ಕೂತಿರುವುದರಿಂದ ಕೆಲಸವಿಲ್ಲದೇ ಹೊಟ್ಟೆ ತುಂಬಿಸಲು ಕೂಡಾ ಹಲವರಿಗೆ ಕಷ್ಟಸಾಧ್ಯ. ಇದೀಗ ಅಂಥ ಕಲಾವಿದರು, ತಂತ್ರಜ್ಞರ ಕಷ್ಟಕ್ಕೆ ನೆರವಾಗಿದ್ದಾರೆ ಲೇಖಕಿ, ಸಮಾಜಸೇವಕಿ ಸುಧಾ ಮೂರ್ತಿ ಅವರು.

ಸುಧಾ ಮೂರ್ತಿಯವರು ಕಷ್ಟದಲ್ಲಿರುವ ಕಿರುತೆರೆ ಕಲಾವಿದರು, ತಂತ್ರಜ್ಞರಿಗೆ ರೇಷನ್ ಕಿಟ್ ವಿತರಿಸುವ ಮೂಲಕ ಸಹಾಯ ಮಾಡಿದ್ದಾರೆ. ಬರೋಬ್ಬರಿ 3000 ಕಿಟ್ ವಿತರಿಸಿರುವ ಅವರು  ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡಿದ್ದಾರೆ. ಸುಧಾ ಮೂರ್ತಿಯವರ ಮಾಡಿರುವಂತಹ ಈ ಮಹಾತ್ಕಾರ್ಯಕ್ಕೆ ಟೆಲಿವಿಷನ್ ಅಸೋಸಿಯೇಷನ್ ಧನ್ಯವಾದ ಅರ್ಪಿಸಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ