NEWSನಮ್ಮರಾಜ್ಯಸಿನಿಪಥ

ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಸೆಪ್ಟಂಬರ್ 12ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ARM ಚಿತ್ರದ ಟ್ರೈಲರ್ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ.

ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು.

ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ