CrimeNEWSನಮ್ಮಜಿಲ್ಲೆ

ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂಬ ಸಂಶಯ – ಕೊಡಲಿಯಿಂದ ಕಡಿದು ಪೊಲೀಸರಿಗೆ ಶರಣಾದ ಪತಿ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಹೆಂಡತಿ ಪರಪುರಷರ ಜತೆ ಇರುತ್ತಾಳೆ ಎಂದು ಸದಾ ಸಂಶಯ ಪಡುತ್ತಿದ್ದ ದುರುಳನೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಬಳಿಕ ತನ್ನ ಮಕ್ಕಳೊಂದಿಗೆ ಪೊಲೀಸ್‌ ಠಾಣೆಗೆ ಹೋಗಿದ್ದಾನೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಟ್ಟಪ್ಪ ಎಂಬಾತ ತನ್ನ ಪತ್ನಿ ರೇಣುಕಾ (26)ಳನ್ನು ಕೊಡಲಿಯಿಂದ ಕಡಿದ ಆರೋಪಿ.

ಬೆಟ್ಟಪ್ಪ ಮತ್ತು ರೇಣುಕಾಳ ಮದುವೆ ಏಳು ವರ್ಷದ ಹಿಂದೆ ಆಗಿತ್ತು. ಆದರೆ ಬೆಟ್ಟಪ್ಪ ಆರಂಭದಿಂದಲೂ ಸಂಶಯ ಪಿಶಾಚಿ. ರೇಣುಕಾಳಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪ ಮಾಡುತ್ತಿದ್ದ. ಮನೆಯಲ್ಲಿ ಗಂಡ-ಹೆಂಡತಿ ಮಧ್ಯೆ ಈ ವಿಷಯಕ್ಕೆ ನಿತ್ಯ ಜಗಳ ನಡೆಯುತ್ತಲೇ ಇತ್ತು.

ಅಲ್ಲದೆ ರೇಣುಕಾಗೆ ಅನೈತಿಕ ಸಂಬಂಧವಿದೆ ಎಂದು ಬೆಟ್ಟಪ್ಪ ರೇಣುಕಾಳ ತಾಯಿಗೂ ದೂರು ನೀಡಿದ್ದ. ಇನ್ನು ಮಂಗಳವಾರ ತಡರಾತ್ರಿಯೂ ಇದೇ ವಿಚಾರದಲ್ಲಿ ಇಬ್ಬರ ನಡುವೆ ಜಗಳ ಆಗಿದೆ. ಜಗಳದಿಂದ ಸಿಟ್ಟಿಗೆದ್ದ ರೇಣುಕಾ ತಾನು ಮನೆ ಬಿಟ್ಟು ತವರಿಗೆ ಹೋಗುವುದಾಗಿ ಹೇಳಿದ್ದಳು. ಇದರಿಂದ ಸಿಟ್ಟಿಗೆದ್ದ ಬೆಟ್ಟಪ್ಪ ಮನೆಯಲ್ಲಿದ್ದ ಕೊಡಲಿಯಿಂದ ರೇಣುಕಾಳ ಮೇಲೆ ಹಲ್ಲೆ ಮಾಡಿದ್ದಾನೆ.

ನಾಲ್ಕು ಬಾರಿ ಕೊಡಲಿಯಿಂದ ಹೊಡೆದ ಬೆಟ್ಟಪ್ಪ ಬಳಿಕ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಠಾಣೆಗೆ ಹೋಗಿ ಶರಣಾಗತನಾಗಿದ್ದಾನೆ. ಲಿಂಗಸುಗೂರು ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ