NEWSನಮ್ಮರಾಜ್ಯ

ಹತ್ತು ದಿನಗಳಲ್ಲಿ 1.37ಲಕ್ಷ ಪಿಎಫ್ ಹಿಂಪಡೆಯುವಿಕೆ ಪೂರ್ಣ

ಭವಿಷ್ಯನಿಧಿ ಸಹಾಯಕ ಆಯುಕ್ತ ತಪಸ್ ಕುಮಾರ್ ಘೋಷ್ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನೌಕರರ ಭವಿಷ್ಯ ನಿಧಿ ಸಂಘಟನೆಯು ಹತ್ತು ದಿನದೊಳಗೆ ಸುಮಾರು 1.37 ಲಕ್ಷ ಪಿಎಫ್ ಕ್ಲೇಮ್ಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಭವಿಷ್ಯನಿಧಿ ಸಹಾಯಕ ಆಯುಕ್ತ ತಪಸ್ ಕುಮಾರ್ ಘೋಷ್ ತಿಳಿಸಿದ್ದಾರೆ.

ಕೋವಿಡ್-19 ಮಹಾಮಾರಿಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಯೋಜನೆಯ ಪ್ರಕಾರ ಪ್ಯಾರಾ 68ಐ (3)ರ ಅಡಿಯಲ್ಲಿ ಮಾರ್ಚ್ 28ರಂದು ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು, ಈ ಮೂಲಕ ಪಿಎಫ್‌ ಖಾತೆ ನೌಕರರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಪಿಎಫ್ ಖಾತೆಯಲ್ಲಿ ನೌಕರರ ಪಾಲಿನ ಹಣದಲ್ಲಿ ಶೇ.75ರಷ್ಟು ಮೊತ್ತವನ್ನು ಹಾಗೂ ಮೂಲ ವೇತನ, ತುಟ್ಟಿ ಭತ್ಯೆಗೆ ಸಮಾನವಾದ ಹಣವನ್ನು ಕಡಿಮೆ ಹಣ ಉಳ್ಳವರು ಮುಂಗಡ ಹಣವನ್ನು ಪಡೆಯಬಹುದು, ಹಾಗೆಯೇ ಯಾವುದೆ ರೀತಿಯ ಆದಾಯ ತೆರಿಗೆ ಕಡಿತಕ್ಕೆ ಒಳಪಡುವುದಿಲ್ಲ ಎಂದು ತಿಳಿಸಿದ್ದಾರೆ.

ನೌಕರರ ಭವಿಷ್ಯ ನಿಧಿ ಸಂಘಟನೆಯು ಕೇವಲ 24ಗಂಟೆಗಳಲ್ಲಿ ಚಂದದಾರರಿಗೆ ಅನುಕೂಲವಾಗುವ ರೀತಿ ಮಾರ್ಚ್ 29ರಂದು ಹೊಸ ಸಾಫ್ಟ್ವೇರ್ನ್ನು ಪರಿಚಯಿಸಿದ್ದಾರೆ. ಹಾಗೆಯೇ ಯಾವುದೆ ಕಾಗದದ ವಹಿವಾಟು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದಿರಿಸಿ ಹಾಗೂ ಕೆವೈಸಿ ಸರಿಯಾಗಿರುವ ಎಲ್ಲಾ ಅರ್ಜಿಗಳನ್ನು ಪೂರ್ಣಗೊಳಿಸಿದೆ ಮತ್ತು ಕ್ಷೇಮ್ಗಳು ಸ್ವಯಂಚಾಲಿತವಾಗಿ ಇತ್ಯರ್ಥವಾಗುವ ರೀತಿ ಭವಿಷ್ಯನಿಧಿ ಸಂಘಟನೆಯು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಕೋವಿಡ್-19 ಮಹಾಮಾರಿಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರ್ಮಿಕರಿಗೆ ಅನುಕೂಲವಾಗಲು ಹೊಸ ನಿಯಮದನ್ವಯವಾಗಿ 1.37 ಲಕ್ಷ ಕ್ಲೇಮ್ಗಳ ಮೊತ್ತ 279.65 ಕೋಟಿ ರೂ ಹಣವನ್ನು ಪಿಎಫ್ ಚಂದದಾರರು ಹಿಂಪಡೆದಿದ್ದಾರೆ ಮತ್ತು 72 ಗಂಟೆಗಳಿಗಿAತ ಕಡಿಮೆ ಅವಧಿಯಲ್ಲಿ ಪರಿಷ್ಕರಿಸಿದ ಹಣ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭವಿಷ್ಯನಿಧಿ ಸಂಘಟನೆಯು ಜನ್ಮದಿನಾಂಕದ ಯಾವುದೆ ತಿದ್ದುಪಡಿಗಳಿದ್ದಲ್ಲಿ ಸಡಲಿಕೆಯನ್ನು ನೀಡಿರುತ್ತಾರೆ. ಅದಕ್ಕೆ ಸರಿಯಾದ ಪುರಾವೆಯಿರುವ ಆಧಾರ್ ಹಾಗೂ ಜನ್ಮದಿನಾಂಕದ ಪತ್ರವನ್ನು ಸರಿಯಾದ ಪುರಾವೆ ಎಂದು ಒಪ್ಪಿಕೊಳ್ಳಲಾಗಿದ್ದು, ಆದರೆ ಎರಡು ದಾಖಲೆಗಳಲ್ಲಿರುವ ವ್ಯತ್ಯಾಸ 3 ವರ್ಷಗಳ ಒಳಗಿರಬೇಕು.ಇಂತಹ ಪುರಾವೆ ಭವಿಷ್ಯನಿಧಿಯು ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ