NEWSದೇಶ-ವಿದೇಶ

ಹೃದಯಾಘಾತದಿಂದ ಕನ್ನಡದ ಯೋಧ ಮುರಳೀಧರ ರೈ ಕರ್ತವ್ಯದಲ್ಲಿದ್ದಾಗಲೇ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಭೋಪಾಲ್‌ನಲ್ಲಿ ಸಶಸ್ತ್ರ ಸೀಮಾ ಬಲ್‌ನಲ್ಲಿ ಕರ್ತವ್ಯದಲ್ಲಿದ್ದಾಗಲೇ ಕನ್ನಡದ ಕರಾವಳಿ ಮೂಲದ ಯೋಧ ಮುರಳೀಧರ ರೈ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಳೀಧರ ರೈ (37) ಹೃದಯಾಘಾತಕ್ಕೆ ಒಳಗಾಗಿ ನಿಧನರಾದವರು. ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕರ್ತವ್ಯದಲ್ಲಿದ್ದು ಮಲಗಿದ್ದಾಗಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಮುಂಜಾನೆ ಸಹೋದ್ಯೋಗಿಗಳು ಬಂದು ಅವರನ್ನು ನೋಡಿದಾಗಲೇ ವಿಷಯ ತಿಳಿದಿದೆ.

ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್‌.ರವಿಕುಮಾರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆ ಬಳಿಕ ಎ.ಜೆ.ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ