CrimeNEWSದೇಶ-ವಿದೇಶ

ಹಿಮಾಚಲ ಪ್ರದೇಶದ ಅಣ್ಣಿ ನಗರದಲ್ಲಿ ಗುಡ್ಡಕುಸಿತ: ನೋಡ ನೋಡುತ್ತಿದ್ದಂತೆ ಧರೆಗುರುಳಿದ ಭಾರಿ ಕಟ್ಟಡಗಳು

ವಿಜಯಪಥ ಸಮಗ್ರ ಸುದ್ದಿ

ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅಣ್ಣಿ ನಗರದಲ್ಲಿ ಗುಡ್ಡಕುಸಿತಕ್ಕೆ 7 ಕಟ್ಟಡಗಳು ನೋಡು ನೋಡುತ್ತಿದ್ದಂತೆ ಧರೆಗುರುಳಿರುವ ಘಟನೆ ಇಂದು ನಡದಿದೆ.

ಈ ಕಟ್ಟಡಗಳಲ್ಲಿದ್ದವರನ್ನು 3 ದಿನಗಳ ಹಿಂದಷ್ಟೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಆದರೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಸುರಿದ ಭೀಕರ ಮಳೆ ಮತ್ತು ಅರಿಂದ ಉಂಟಾದ ಪ್ರವಾಹಕ್ಕೆ ತತ್ತರಿಸಿದ್ದ ಹಿಮ ನಾಡಿನಲ್ಲಿ ಪದೇ ಪದೇ ಭೂಕುಸಿತದಂತಹ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಪ್ರಕೃತಿ ವಿಕೋಪದ ದುರಂತಗಳು ನಿಲ್ಲುತ್ತಲೇ ಇಲ್ಲ.

ಹಿಮಾಚಲ ಪ್ರದೇಶದ ಹಲವೆಡೆ ಸಂಭವಿಸಿದ ಭೂಕುಸಿತಕ್ಕೆ ಹಲವು ಮನೆಗಳು ಸಂಪೂರ್ಣ ಧರಶಾಹಿ ಆಗಿವೆ. ಈ ಬಾರಿಯ ಮಳೆರಾಯನ ಆರ್ಭಟ, ಭೂಕುಸಿತಕ್ಕೆ ಸುಮಾರು 238 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಮತ್ತೆ ಕುಲು ಜಿಲ್ಲೆಯ ಈ ಕಟ್ಟಡಗಳು ನೆಲಸಮವಾಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಣ್ಣ ಮುಂದೆಯೇ ಮನೆಗಳೆಲ್ಲ ಕುಸಿದು ಬೀಳುತ್ತಿರೋದನ್ನ ನೋಡಿದ ಮಂದಿ ಬೆಚ್ಚಿ ಬಿದ್ದಿದ್ದಾರೆ.

ಕುಲು ಮತ್ತು ಮಂಡಿ ನಗರಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಜಾಮ್: ಮನೆಗಳು ಕುಸಿದು ಬೀಳುತ್ತಿರೋ ದೃಶ್ಯಗಳು ಒಂದು ಕಡೆಯಾದ್ರೆ ಮತ್ತೊಂದೆ ಹೆದ್ದಾರಿಗಳ ಮೇಲೂ ಭೂಕುಸಿತ ಉಂಟಾಗಿ 800ಕ್ಕೂ ಅಧಿಕ ರಸ್ತೆಗಳು ಬಂದ್ ಆಗಿವೆ. ಹಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿದ್ದು ಹಿಮಾಚಲ ಪ್ರದೇಶದ ಕುಲು ಮತ್ತು ಮಂಡಿ ನಗರಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಜಾಮ್ ಆಗಿದೆ. ಸುಮಾರು 10 ಕಿಲೋ ಮೀಟರ್‌ನಷ್ಟು ಟ್ರಾಫಿಕ್‌ ಜಾಮ್ ಆಗಿದೆ.

ಇನ್ನು ಕಿಲೋ ಮೀಟರ್‌ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿರೋ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಜಾಮ್‌ನಲ್ಲಿ ತಿನ್ನಲು ಆಹಾರ, ಕುಡಿಯಲು ನೀರು ಇಲ್ಲದೆ ಡ್ರೈವರ್‌ಗಳು ಪರದಾಡುತ್ತಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಹಾಗೂ ಕುಲುವಿನಲ್ಲಿ ಈಗಲೂ ಮಳೆ ಮುಂದುವರಿದಿದೆ. ಮನೆ, ಆಸ್ಪತ್ರೆ ಸೇರಿದಂತೆ ಹಲವು ಕಟ್ಟಡಗಳು ಜಲಾವೃತಗೊಂಡಿವೆ.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು