NEWSನಮ್ಮರಾಜ್ಯರಾಜಕೀಯ

ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ: ಎಎಪಿ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು.

ನಗರದ ಪಕ್ಷದ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ ಸರ್ಕಾರದ ಭರವಸೆಯು ಕೇವಲ ಘೋಷಣೆಯಾಗಿ ಉಳಿದಿದೆಯೇ ಹೊರತು ಜಾರಿಗೆ ಬರುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಬಿಜೆಪಿ ಶಾಸಕರು ಹಾಗೂ ಸಚಿವರ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಯೋಜನೆಗಳನ್ನು ಜಾರಿಗೆ ತರುವ ಬದಲು ಕೇವಲ ಘೋಷಣೆ ಹಾಗೂ ಶಂಕುಸ್ಥಾಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಆರ್ಥಿಕ ಶಿಸ್ತು ಕಾಪಾಡಿಕೊಳ್ಳುವುದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಮುಂತಾದವರು ಬೀದಿಗಿಳಿದು ಪ್ರತಿಭಟಿಸಿದರೆ ಮಾತ್ರ ಅವರಿಗೆ ಸಂಬಳ ಸಿಗುತ್ತದೆ. ಇಲ್ಲದಿದ್ದರೆ ಐದಾರು ತಿಂಗಳ ವೇತನ ಬಾಕಿಯಿದ್ದರೂ ಸರ್ಕಾರ ಈ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ.

ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಕೂಡ ಅನುದಾನ ಬಿಡುಗಡೆ ಮಾಡದೇ, ಅವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ತನಕ ರಾಜ್ಯದ ಹಾಗೂ ಜನಸಾಮಾನ್ಯರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ ಎಂದು ಬಿ.ಟಿ.ನಾಗಣ್ಣ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ