NEWSದೇಶ-ವಿದೇಶವಿದೇಶ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಗೌರವಾರ್ಥ ಸೆ.5 ʻಗೌರಿ ಲಂಕೇಶ್‌ ದಿನʼ ಘೋಷಿಸಿದ ಬರ್ನಾಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆನಡಾದ ಬರ್ನಾಬಿ ನಗರವು ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಗೌರವಾರ್ಥ ಸೆ.5 ಅನ್ನು ʻಗೌರಿ ಲಂಕೇಶ್‌ ದಿನʼ ಎಂದು ಘೋಷಿಸಿದೆ.

ಗೌರಿ ಲಂಕೇಶ್‌ ಹತ್ಯೆಯಾಗಿ ಇದೇ ಸೆ.5ಕ್ಕೆ ನಾಲ್ಕು ವರ್ಷಗಳು ತುಂಬಲಿವೆ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಬರ್ನಾಬಿ ನಗರವು ಈ ನಿರ್ಧಾರವನ್ನು ಘೋಷಿಸಿದೆ.

ನಗರದ ಮೇಯರ್‌ ಮೈಕ್ ಹರ್ಲಿ ಅವರು ಹೊರಡಿಸಿರುವ ಘೋಷಣಾ ಪತ್ರದಲ್ಲಿ, ʻಧೈರ್ಯಶಾಲಿ ಭಾರತೀಯ ಪತ್ರಕರ್ತೆ ಗೌರಿ ಲಂಕೇಶ್‌ ಸತ್ಯ ಮತ್ತು ನ್ಯಾಯದ ಪರವಾಗಿ ನಿಂತರು. ದಮನದ ವಿರುದ್ಧ ಮತ್ತು ಮಾನವ ಹಕ್ಕುಗಳ ಹೋರಾಟದಲ್ಲಿ ಅವರು ತಮ್ಮ ಜೀವವನ್ನೆ ಅರ್ಪಿಸಿದರುʼ ಎಂದು ಹೇಳಿದ್ದಾರೆ.

ಅಕ್ಟೋಬರ್ 8, 2018 ರಂದು ಫ್ರಾನ್ಸ್‌ನ ಬೈಯಕ್ಸ್-ಕ್ಯಾಲ್ವಾಡೋಸ್ ಪ್ರಶಸ್ತಿಯನ್ನು ಗೌರಿ ಲಂಕೇಶ್‌ ಅವರಿಗೆ ಮರಣೋತ್ತರವಾಗಿ ನೀಡಿ ಗೌರವಿಸಲಾಗಿತ್ತು.

2017ರ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ನಿವಾಸದ ಮುಂದೆ ಗೌರಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು