NEWSನಮ್ಮರಾಜ್ಯಸಿನಿಪಥ

ಹಲೋ ಡ್ಯಾಡಿ ಸಿನಿಮಾದ ಬಾಲನಟ ನಿತಿನ್ ಗೋಪಿ ಹೃದಯಾಘಾತದಿಂದ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾಲ ನಟರಾಗಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಹಾಗೂ ಇತ್ತೀಚೆಗೆ ಹಲವು ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದ ನಿತಿನ್ ಗೋಪಿ (39) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ದಿವಂಗತ ಡಾ.ವಿಷ್ಣುವರ್ಧನ್​ ಅಭಿನಯದ ಹಲೋ ಡ್ಯಾಡಿ ಸಿನಿಮಾದಲ್ಲಿ ಬಾಲ ನಟನಾಗಿ ಪ್ರೇಕ್ಷಕರ ಮನಗೆದಿದ್ದರು. ಕನ್ನಡಿಗರ ಮನೆ ಮಾತಾಗಿದ್ದ ನಟ ಹಾಗೂ ನಿರ್ದೇಶಕ ನಿತಿನ್​ ಗೋಪಿ ಬಾಲನಟನಾಗಿಯೇ ಕನ್ನಡ ಸಿನಿಮಾ ಪ್ರಿಯರಿಗೆ ಹೆಚ್ಚು ಪರಿಚಿತರಾಗಿದ್ದರು.

‘ನಿಶಬ್ಧ’, ‘ಕೆರಳಿದ ಕೇಸರಿ’, ‘ಚಿರಬಾಂದವ್ಯ’, ‘ಮುತ್ತಿನಂಥ ಹೆಂಡತಿ’, ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಿತಿನ್ ಬಾಲನಟನಾಗಿ ನಟಿಸಿದ್ದರು. ಇನ್ನು ‘ಹಲೋ ಡ್ಯಾಡಿ’ ಚಿತ್ರದಲ್ಲಿ ವಿಷ್ಣುವರ್ಧನ್ ಅವರ ಮಗನಾಗಿ ಕಾಣಿಸಿಕೊಂಡಿದ್ದ ನಿತಿನ್, “ಶಾಲೆಗೆ ಈ ದಿನ ರಜಾ” ಹಾಡಿನ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಇಂದಿಗೂ ಉಳಿದುಕೊಂಡಿದ್ದಾರೆ.

ಹೃದಯಾಘಾತ: ಇಟ್ಟಮಡುವಿನ ಅಪಾರ್ಟ್‌ಮೆಂಟ್‌ನಲ್ಲಿದ್ದ ನಿತಿನ್ ಅವರಿಗೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿದೆ. ಆದರೆ ಮಾರ್ಗ ಮಧ್ಯದಲ್ಲೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇನ್ನು ಮುಂಬೈನಲ್ಲಿ ಚಿತ್ರೀಕರಣಗೊಂಡ ‘ಹರ ಹರ ಮಹದೇವ’ ಧಾರಾವಾಹಿಯ ಹಲವು ಸಂಚಿಕೆಗಳನ್ನು ಹಾಗೂ ತಮಿಳು ಧಾರಾವಾಹಿಯೊಂದನ್ನು ನಿರ್ದೇಶಿಸಿದ್ದಾರೆ. ಬಾಲಾಜಿ ಟೆಲಿಫಿಲ್ಮ್ಸ್ ಹಾಗೂ ಶ್ರುತಿ ನಾಯ್ಡು ಅವರ ಕೆಲ ಧಾರಾವಾಹಿಗಳಲ್ಲೂ ಕೆಲಸ ಮಾಡಿದ್ದು, ಹೊಸ ಧಾರಾವಾಹಿಯೊಂದರ ನಿರ್ದೇಶನಕ್ಕೆ ಸಿದ್ಧತೆ ನಡೆಸಿದ್ದರು.

ಕೇವಲ 39ರ ವಯಸ್ಸಿನ ನಿತಿನ್, ಹೊಸ ಧಾರಾವಾಹಿಯನ್ನು ನಿರ್ದೇಶನ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಅಂದಹಾಗೆ ಇವರು ಖ್ಯಾತ ಕೊಳಲು ವಾದ ಗೋಪಿ ಅವರ ಪುತ್ರ. ನಿತಿನ್ ಅಗಲಿಕೆಗೆ ಕಿರುತೆರೆಯ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು