NEWSನಮ್ಮಜಿಲ್ಲೆನಮ್ಮರಾಜ್ಯ

ಹೇಳಿದ ಕಡೆ ಬಸ್‌ ನಿಲ್ಲಿಸದ್ದಕ್ಕೆ ನಿರ್ವಾಹಕನ ಮೇಲೆ ಮಹಿಳೆ, ಸಂಬಂಧಿಕರಿಂದ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಹತ್ತಿದ ಮಹಿಳೆಯೊಂದಿಗೆ ಅನುಚಿತವಾಗಿ ನಿರ್ವಾಹಕ ವರ್ತಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ಸಂಬಂಧಿಕರು ಡ್ಯೂಟಿ ಮೇಲೆ ಇರುವ ನೌಕರನ ಮೇಲೆ ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಗುರುವಾರ ಚಳ್ಳಕೆರೆ KSRTC ಬಸ್ ನಿಲ್ದಾಣದ ಬಳಿ ಹಲ್ಲೆ ಮಾಡಿದ್ದು, ನಿರ್ವಾಹಕ ಚಂದ್ರೇಗೌಡ ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ನಲ್ಲಿ ಮಹಿಳೆ ಬುಧವಾರ ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಪ್ರಯಾಣಿಸುತ್ತಿದ್ದಳು. ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಳು.

ಆದರೆ ಅಲ್ಲಿ ಬಸ್ ನಿಲ್ಲಿಸದೇ ನಿರ್ವಾಹಕ ನಿಯಮದಂತೆ ಮೆಜಸ್ಟಿಕ್‍ನಲ್ಲಿ ಬಸ್ ನಿಲ್ಲಿಸಿದ್ದಾನೆ. ಇದರಿಂದ ಸಿಟ್ಟಾದ ಮಹಿಳೆ ನಿರ್ವಾಹಕನೊಂದಿಗೆ ಗಲಾಟೆ ಮಾಡಿದ್ದಾಳೆ. ಅಲ್ಲದೇ ಕುಟುಂಬಸ್ಥರ ಬಳಿ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

ಈ ಘಟನೆಯಿಂದಾಗಿ ಆಕ್ರೋಶಗೊಂಡಿದ್ದ ಮಹಿಳೆ ಇಂದು ಚಳ್ಳಕೆರೆ ಬಸ್ ನಿಲ್ದಾಣಕ್ಕೆ ಆ ಬಸ್ ಬರುವವರೆಗೆ ಸಂಬಂಧಿಗಳೊಂದಿಗೆ ಕಾದು ಕುಳಿತು ಹಲ್ಲೆ ನಡೆಸಿದ್ದಾಳೆ. ಹಲ್ಲೆಗೊಳಗಾದ ಬಸ್ ನಿರ್ವಾಹಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ