NEWSನಮ್ಮಜಿಲ್ಲೆ

ಹೊಸಕೋಟೆ ಪಟ್ಟಣಕ್ಕೂ ಮೆಟ್ರೋ ರೈಲು ಸಂಚಾರ ವಿಸ್ತರಿಸಲು ಸಚಿವ ಎಂಟಿಬಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ಸೇವೆವನ್ನು ವಿಸ್ತರಿಸಲು, ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್. ನಾಗರಾಜು (ಎಂಟಿಬಿ) ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಮೂಲಕ ಸಚಿವ ಎಂಟಿಬಿ ಮನವಿ ಸಲ್ಲಿಸಿದರು.

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಮೀ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ. ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ.

ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್‌ಮೆಂಟ್ ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ. ಅಲ್ಲದೆ, ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ, ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲೂಕಿನ ಮೂಲಕ ಹಾದು ಹೋಗುತ್ತದೆ.

ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ಮೆಟ್ರೋ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು.

ಹಾಗಾಗಿ, ಮೆಟ್ರೋ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ಸಚಿವರಾದ ಎನ್. ನಾಗರಾಜು (ಎಂಟಿಬಿ) ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು