ಆರೋಗ್ಯನಮ್ಮಜಿಲ್ಲೆ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಬಿಸಿ ನೀರು, ಮಾಸ್ಕ್ ಪೂರೈಕೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಿಶ್ವದಾದ್ಯಂತದ  ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ತಮ್ಮ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರು ಪೂರೈಕೆ, ಮಾಸ್ಕ್ ವಿತರಣೆಗೆ ಕ್ರಮ ಕೈಗೊಂಡಿದ್ದಾರೆ.

ಹುಬ್ಬಳ್ಳಿ  ಘಂಟಿಕೇರಿಯ ಶ್ರೇಯಾ ನಗರ, ಶಿರಡಿ ನಗರದ ವಿದ್ಯಾರ್ಥಿ ನಿಲಯಗಳು  ಧಾರವಾಡ ಸೈದಾಪೂರದ ಬಾಲಕಿಯರ ವಿದ್ಯಾರ್ಥಿನಿಲಯ,ಅಳ್ನಾವರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ,ಬೇಂದ್ರೆ ನಗರದ ಎಸ್.ಟಿ ಬಾಲಕಿಯರ ವಸತಿ  ಸೇರಿದಂತೆ ವಿವಿಧ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಬಿಸಿನೀರು ಪೂರೈಕೆ ವ್ಯವಸ್ಥೆ  ಹಾಗೂ ಮಾಸ್ಕ್ ಗಳನ್ನು ನೀಡಲಾಯಿತು.

ಕೊರೊನಾ ವೈರಸ್ ಹೇಗೆ ಹರಡುತ್ತದೆ ಹಾಗೂ  ತಡೆಯಲು  ತೆಗೆದುಕೊಳ್ಳಬಹುದಾದ ಕೆಲವೊಂದು ಸುಲಭ  ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಸ್ವಚ್ಛ ಹಾಗೂ ಕುದಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಬೇಕು  ಸರಿಯಾಗಿ ಬೇಯಿಸಿದ ಆಹಾರವನ್ನು ಸೇವಿಸಬೇಕು. ಬೇಯಿಸದೇ ಇರುವ ಹಾಗೂ ಶುಚಿತ್ವ ಇಲ್ಲದಿರುವ ಪದಾರ್ಥವನ್ನು ಸೇವಿಸಬೇಡಿ ಆಗಾಗ  ಕೈಯನ್ನು ಸಾಬೂನಿನಿಂದ ಇಲ್ಲವೇ ಹ್ಯಾಂಡ್ ವಾಶ್ ನಿಂದ ತೊಳೆಯುತ್ತಿರಬೇಕು.  ಸೋಂಕು ಹರಡದಿರಲು ಈ ಕ್ರಮ ಸಹಕಾರಿಯಾಗುತ್ತದೆ. ಭೇಟಿಯ ಸಂದರ್ಭದಲ್ಲಿ ಕೈಕುಲುಕುವ ಬದಲು ನಮಸ್ಕಾರ ಮಾಡಬೇಕು.ಮುಂಜಾಗ್ರತಾ  ಕ್ರಮಗಳನ್ನು ಪಾಲಿಸಿ  ಸುರಕ್ಷಿತವಾಗಿರುವಂತೆ ಜಾಗೃತಿ ಮೂಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ