CrimeNEWSಕೃಷಿನಮ್ಮಜಿಲ್ಲೆ

ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ 50ಕ್ಕೂ ಹೆಚ್ಚು ಕಾಡಾನೆಗಳ ಉಪಟಳ – ಬೆಳೆ ನಾಶ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕಾಫಿ ತೋಟದಲ್ಲಿ 50ಕ್ಕೂ ಹೆಚ್ಚು ಆನೆಗಳ ತಂಡ ಬೀಡುಬಿಟ್ಟಿದ್ದು, ಅವುಗಳ ಉಪಟಳಕ್ಕೆ ಜಮೀನುಗಳಲ್ಲಿ ವಿವಿಧ ಫಸಲುಗಳನ್ನು ಒಡ್ಡಿದ್ದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ಮಲೆನಾಡಿನಲ್ಲಿ ಕಾಡಾನೆಗಳ ಹಿಂಡು ದಾಂಗುಡಿ ಇಟ್ಟಿದ್ದು ರೈತರು ಫಸಲುಗಳನ್ನು ತುಳಿದು ತಿಂದು ನಾಶ ಮಾಡುತ್ತಿವೆ. ಈ ಮಲೆನಾಡು ಭಾಗದಲ್ಲಿ ಈಗಲೂ ಕಾಡಾನೆಗಳ ಉಪಟಳ ಮುಂದುವರಿದಿದೆ. ಇವುಗಳ ದಾಳಿಗೆ ಸಕಲೇಶಪುರ ತಾಲೂಕಿನ ಬೈಕೆರೆ, ನಾರ್ವೆಪೇಟೆ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

50 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ನಾಟಿ ಮಾಡಿದ್ದ ಭತ್ತದ ಗದ್ದೆಯಲ್ಲೆಲ್ಲಾ ಓಡಾಡಿ, ತುಳಿದು ನಾಶ ಮಾಡಿವೆ. ಕಾಫಿ ತೋಟದಲ್ಲಿ ಮನಬಂದಂತೆ ಓಡಾಡುತ್ತಿರುವುದರಿಂದ ಕಾಫಿ ಗಿಡಗಳೂ ನಾಶಗೊಂಡಿವೆ. ರೈತರು ಬೆಳೆದಿದ್ದ ಬಾಳೆ, ಅಡಿಕೆ ಗಿಡಗಳನ್ನು ನಾಶ ಮಾಡಿವೆ. 20 ವರ್ಷಗಳಿಂದ ಬೆಳೆದಿದ್ದ ಕಾಫಿ ತೋಡವನ್ನು ತುಳಿದು ನಾಶಮಾಡಿದ್ದು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಮದ ಗಿಡ್ಡಪ್ಪ, ಚಂದ್ರೇಗೌಡ, ಮಲ್ಲೇಶ್ ಹಾಗೂ ಇತರ ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿ ಹೋಗಿದ್ದಾರೆ. ಪ್ರತಿನಿತ್ಯ ಕಾಡಾನೆಗಳಿವೆ ಎಚ್ಚರಿಕೆಯಿಂದ ಓಡಾಡುವಂತೆ ಮಾಹಿತಿ ನೀಡುವ ಅರಣ್ಯ ಇಲಾಖೆ ಸಿಬ್ಬಂದಿ ಇಷ್ಟೊಂದು ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದರೂ ಇತ್ತ ತಿರುಗಿ ನೋಡಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಲೂರು ತಾಲೂಕಿನ ಸುಲಗಳಲೆ ಗ್ರಾಮದಲ್ಲೂ ಕಾಡಾನೆಗಳ ಹಿಂಡು ದಾಳಿ ಮಾಡಿ ಕಾಫಿ, ಮೆಣಸು, ತೆಂಗು, ಕಿತ್ತಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ. 50ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ಕಾಫಿ ತೋಟದಲ್ಲಿದ್ದ ನೀರಾವರಿ ಪೈಪ್‌ಗಳನ್ನು ತುಳಿದು ಹಾಕಿವೆ.

ಗ್ರಾಮದ ದೇವರಾಜ್, ಜಗದೀಶ್, ಕೆಂಚೇಗೌಡ, ರಾಮಚಂದ್ರ ಎಂಬುವವರ ಕಾಫಿ ತೋಟದಲ್ಲಿ ಬೆಳೆ ನಾಶವಾಗಿದ್ದು, ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

50ಕ್ಕೂ ಹೆಚ್ಚು ಆನೆಗಳು ಒಮ್ಮೆಲೇ ಕಾಫಿ ತೋಟದ ಒಳಗೆ ಅಟ್ಟಹಾಸ ಮೆರೆದಿವೆ. 2-3 ಎಕರೆ ತೋಟಗಳು ಸಂಪೂರ್ಣ ಹಾಳಾಗಿದೆ. ಇದರಿಂದ ರೈತರು ಕಂಗಾಲಾಗಿದ್ದು ಕಣ್ಣೀರು ಹಾಕುತ್ತಿದ್ದಾರೆ. ಕೃಷಿ ಮಾಡಿಕೊಂಡು ಬದುಕುತ್ತಿದ್ದ ಜನರನ್ನು ಆನೆಗಳ ಉಪಟಳ ನಿರಂತರವಾಗಿ ಕಾಡುತ್ತಿದೆ. ಬಹುತೇಕ ಕೃಷಿ ನೀರಾವರಿ ಪೈಪ್‌ಗಳು ಆನೆಗಳ ದಾಳಿಗೆ ಒಳಗಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಹೆಚ್ಚು ಮರಿಗಳಿರುವ ಕಾಡಾನೆಗಳ ಹಿಂಡು ಗ್ರಾಮದ ಬಳಿಯೇ ಬೀಡುಬಿಟ್ಟಿದ್ದು, ಜೀವಭಯದಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ