NEWSಕೃಷಿ

ಹಸಿರು ಮನೆ ವಿದ್ಯುತ್ ಬಿಲ್ಲಿಂದ ವಿನಾಯಿತಿ ನೀಡಲು ಸಿಎಂಗೆ ಮನವಿ

ತೋಟಗಾರಿಕಾ ಬೆಳೆಗಳ ಉತ್ತೇಜನಕ್ಕೆ ಆದ್ಯತೆ l ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಪಂಪ್‍ಸೆಟ್‍ಗಳ ವಿದ್ಯುತ್ ಬಿಲ್ ಕಟ್ಟುವುದರಿಂದ ರೈತರಿಗೆ ಹೇಗೆ ವಿನಾಯಿತಿ ನೀಡಲಾಗಿದೆಯೋ ಅದೇ ರೀತಿ ತೋಟಗಾರಿಕಾ ಬೆಳೆಗಳಿಗೆ ಬಳಸಲಾಗುವ ಹಸಿರು ಮನೆಗಳಲ್ಲಿ ವಿದ್ಯುತ್ ಬಳಕೆಯ ಬಿಲ್‍ನ್ನು ಕಟ್ಟುವುದರಿಂದ ರೈತರಿಗೆ ವಿನಾಯಿತಿ ನೀಡುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್-19 ರ ಹಿನ್ನೆಲೆ ರಾಜ್ಯದಲ್ಲಿ ಜಾರಿಯಿರುವ ಲಾಕ್‍ಡೌನ್‍ನಿಂದಾಗಿ ನಾಡಿನ ರೈತರು ಅನುಭವಿಸುತ್ತಿರುವ ತೊಡಕುಗಳು ಹಾಗೂ ತೊಂದರೆಗಳನ್ನು ದೂರ ಮಾಡಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು.

ಕೃಷಿಗೆ ಬಳಸಲಾಗುವ ಕೀಟನಾಶಕಗಳ ಉತ್ಪಾದಕರು ಈ ಲಾಕ್‍ಡೌನ್ ಅವಧಿಯ ಲಾಭ ಪಡೆದು ರೈತರಿಗೆ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು  ಮಾರಾಟ ಮಾಡುತ್ತಿದ್ದು, ಇದೀಗ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾದ 375 ಉತ್ಪನ್ನಗಳ ನಮೂನೆಗಳಲ್ಲಿ 170 ಕಳಪೆ ಗುಣಮಟ್ಟದಿಂದ ಕೂಡಿರುವುದು ದೃಡಪಟ್ಟಿದೆ ಹಾಗೂ 6 ಕೋಟಿ ಮೌಲ್ಯದ ಕೃಷಿಗೆ ಬಳಸಲಾಗುವ ರಸಗೊಬ್ಬರ, ಕೀಟನಾಶಕ, ಕಳಪೆ ಭಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದು, ಪೊಲೀಸರು 32 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಇನ್ನು ಮುಂದೆ ಕೃಷಿ ಹಾಗೂ ತೋಟಗಾರಿಕಾ ಅಧಿಕಾರಿಗಳು ತಪಾಸಣಾ ಭೇಟಿಗಳನ್ನು ಹಮ್ಮಿಕೊಂಡು ನಕಲಿ ಕೀಟನಾಶಕಗಳು ಮಾರಾಟವಾಗದಂತೆ ಕ್ರಮವಹಿಸಿಬೇಕು ಎಂದ ಸಚಿವರು ತಪ್ಪಿದಲ್ಲಿ ಕೃಷಿ ಜಾಗೃತ ಸಮಿತಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಅಧಿಕಾರಿ ಮೇಲೆ ಕ್ರಮ ಜರುಗಿಸಲಾಗುವುದು ಎಂದು  ತಿಳಿಸಿದರು.

ಈಗಾಗಲೇ 19 ಜಿಲ್ಲೆಗಳ ಭೇಟಿ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, 23ನೇ ಜಿಲ್ಲೆಯಾಗಿ ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನ, ಸಲಕರಣೆ, ಉಪಕರಣಗಳ ಬಳಕೆ ಹಾಗೂ ಸಾಗಾಣಿಕೆ ಮುಕ್ತವಾಗಿಸುವುದಲ್ಲದೇ ದುರಸ್ಥಿ ವ್ಯವಸ್ಥೆಯನ್ನು ತೆರೆಯುವಂತೆ ಸೂಚನೆ ನೀಡಿದ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳು ಸೇರಿ ರೈತರ ನೆರವಿಗಾಗಿ ಅಗ್ರಿ ವಾರ್ ರೂಂನ್ನು ಸ್ಥಾಪಿಸುವಂತೆ ಸೂಚನೆ ನೀಡಿದರು.

ರೈತರು ವಾಸವಾಗಿರುವ ಸ್ಥಳದಿಂದ ಮತ್ತೊಂದು ಊರಿನಲ್ಲಿರುವ ತಮ್ಮ ಜಮೀನಿಗೆ ತೆರಳಲು ಹಸಿರು ಪಾಸ್ ನೀಡುವಂತೆ ಕೃಷಿ ಇಲಾಖೆ ಜಂಟಿನಿರ್ದೇಶಕರಿಗೆ ಸೂಚಿಸಿದ ಸಚಿವರು ಪಾಸ್ ಅವಧಿಯನ್ನು ಲಾಕ್‍ಡೌನ್ ಮುಗಿಯುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ