NEWSಕೃಷಿ

ಹಸಿರು ಮನೆ ವಿದ್ಯುತ್ ಬಿಲ್ಲಿಂದ ವಿನಾಯಿತಿ ನೀಡಲು ಸಿಎಂಗೆ ಮನವಿ

ತೋಟಗಾರಿಕಾ ಬೆಳೆಗಳ ಉತ್ತೇಜನಕ್ಕೆ ಆದ್ಯತೆ l ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಪಂಪ್‍ಸೆಟ್‍ಗಳ ವಿದ್ಯುತ್ ಬಿಲ್ ಕಟ್ಟುವುದರಿಂದ ರೈತರಿಗೆ ಹೇಗೆ ವಿನಾಯಿತಿ ನೀಡಲಾಗಿದೆಯೋ ಅದೇ ರೀತಿ ತೋಟಗಾರಿಕಾ ಬೆಳೆಗಳಿಗೆ ಬಳಸಲಾಗುವ ಹಸಿರು ಮನೆಗಳಲ್ಲಿ ವಿದ್ಯುತ್ ಬಳಕೆಯ ಬಿಲ್‍ನ್ನು ಕಟ್ಟುವುದರಿಂದ ರೈತರಿಗೆ ವಿನಾಯಿತಿ ನೀಡುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್-19 ರ ಹಿನ್ನೆಲೆ ರಾಜ್ಯದಲ್ಲಿ ಜಾರಿಯಿರುವ ಲಾಕ್‍ಡೌನ್‍ನಿಂದಾಗಿ ನಾಡಿನ ರೈತರು ಅನುಭವಿಸುತ್ತಿರುವ ತೊಡಕುಗಳು ಹಾಗೂ ತೊಂದರೆಗಳನ್ನು ದೂರ ಮಾಡಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು.

ಕೃಷಿಗೆ ಬಳಸಲಾಗುವ ಕೀಟನಾಶಕಗಳ ಉತ್ಪಾದಕರು ಈ ಲಾಕ್‍ಡೌನ್ ಅವಧಿಯ ಲಾಭ ಪಡೆದು ರೈತರಿಗೆ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು  ಮಾರಾಟ ಮಾಡುತ್ತಿದ್ದು, ಇದೀಗ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾದ 375 ಉತ್ಪನ್ನಗಳ ನಮೂನೆಗಳಲ್ಲಿ 170 ಕಳಪೆ ಗುಣಮಟ್ಟದಿಂದ ಕೂಡಿರುವುದು ದೃಡಪಟ್ಟಿದೆ ಹಾಗೂ 6 ಕೋಟಿ ಮೌಲ್ಯದ ಕೃಷಿಗೆ ಬಳಸಲಾಗುವ ರಸಗೊಬ್ಬರ, ಕೀಟನಾಶಕ, ಕಳಪೆ ಭಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದು, ಪೊಲೀಸರು 32 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಇನ್ನು ಮುಂದೆ ಕೃಷಿ ಹಾಗೂ ತೋಟಗಾರಿಕಾ ಅಧಿಕಾರಿಗಳು ತಪಾಸಣಾ ಭೇಟಿಗಳನ್ನು ಹಮ್ಮಿಕೊಂಡು ನಕಲಿ ಕೀಟನಾಶಕಗಳು ಮಾರಾಟವಾಗದಂತೆ ಕ್ರಮವಹಿಸಿಬೇಕು ಎಂದ ಸಚಿವರು ತಪ್ಪಿದಲ್ಲಿ ಕೃಷಿ ಜಾಗೃತ ಸಮಿತಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಅಧಿಕಾರಿ ಮೇಲೆ ಕ್ರಮ ಜರುಗಿಸಲಾಗುವುದು ಎಂದು  ತಿಳಿಸಿದರು.

ಈಗಾಗಲೇ 19 ಜಿಲ್ಲೆಗಳ ಭೇಟಿ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, 23ನೇ ಜಿಲ್ಲೆಯಾಗಿ ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನ, ಸಲಕರಣೆ, ಉಪಕರಣಗಳ ಬಳಕೆ ಹಾಗೂ ಸಾಗಾಣಿಕೆ ಮುಕ್ತವಾಗಿಸುವುದಲ್ಲದೇ ದುರಸ್ಥಿ ವ್ಯವಸ್ಥೆಯನ್ನು ತೆರೆಯುವಂತೆ ಸೂಚನೆ ನೀಡಿದ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳು ಸೇರಿ ರೈತರ ನೆರವಿಗಾಗಿ ಅಗ್ರಿ ವಾರ್ ರೂಂನ್ನು ಸ್ಥಾಪಿಸುವಂತೆ ಸೂಚನೆ ನೀಡಿದರು.

ರೈತರು ವಾಸವಾಗಿರುವ ಸ್ಥಳದಿಂದ ಮತ್ತೊಂದು ಊರಿನಲ್ಲಿರುವ ತಮ್ಮ ಜಮೀನಿಗೆ ತೆರಳಲು ಹಸಿರು ಪಾಸ್ ನೀಡುವಂತೆ ಕೃಷಿ ಇಲಾಖೆ ಜಂಟಿನಿರ್ದೇಶಕರಿಗೆ ಸೂಚಿಸಿದ ಸಚಿವರು ಪಾಸ್ ಅವಧಿಯನ್ನು ಲಾಕ್‍ಡೌನ್ ಮುಗಿಯುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ