CrimeNEWSನಮ್ಮರಾಜ್ಯ

ಹಸು, ಕರು ಮೇಲೆ ಚಿರತೆ ದಾಳಿ: ಪ್ರಾಣದ ಹಂಗು ತೊರೆದು ಆಕಳುಗಳ ಕಾಪಾಡಿದ ಮಾಲೀಕ

ವಿಜಯಪಥ ಸಮಗ್ರ ಸುದ್ದಿ

ಎಂ.ಬಿ.ಅಯ್ಯನಹಳ್ಳಿ (ಕೂಡ್ಲಿಗಿ): ಹಸು ಮತ್ತು ಹಸುವಿ ಕರು ಮೇಲೆ ದಾಳಿ ಮಾಡಿದ ಚಿರತೆಯನ್ನು ಬಡಿದೋಡಿಸುವ ಮೂಲಕ ತನ್ನ ಪ್ರಾಣದ ಹಂಗು ತೊರೆದು ಮಾಲೀಕ ಆಕಳುಗಳನ್ನು ರಕ್ಷಿಸಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿಯ ಹೃದಯ ಭಾಗದಲ್ಲಿರುವ, ವೃಷಭೇಂದ್ರಾಚಾರಿ ಅವರ ಕಣದಲ್ಲಿ ಕಟ್ಟಿದ್ದ ಹಸುವಿನ ಮೇಲೆ ಅಗಸ್ಟ್15ರ ತಡರಾತ್ರಿ ಚಿರತೆ ದಾಳಿ ಮಾಡಿದೆ. ಈ ವೇಳೆ ಹಸುವಿನ ಚೀರಾಟ ಕೇಳಿದ ಕೂಡಲೇ ವೃಷಭೇಂದ್ರಾಚಾರಿ ಮತ್ತು ಅವರ ಸಂಬಂಧಿ ಮಾನಾಚಾರಿ ಕೂಡಲೇ ಉದ್ದನೆಯ ಕೋಲೊಂದನ್ನು ಕೈಯಲ್ಲಿಡಿದು ಬೆದರಿಸುವ ಮೂಲಕ ಚಿರತೆಯನ್ನು ಹಿಮ್ಮೆಟ್ಟಸಿದರು.

ಈ ಮೂಲಕ ತಮ್ಮ ಪ್ರಾಣದ ಹಂಗು ತೊರೆದು, ಚಿರತೆಯನು ಓಡಿಸೋ ಮೂಲಕ ಸಂಬಂಧಿಯ ಆಕಳು ಮತ್ತು ಆಕಳಿನ ಕರುವನ್ನು ಕಾಪಾಡಿದ್ದಾರೆ ಮಾನಪ್ಪಾಚಾರಿ.

ಚಿರತೆಗಳನ್ನು ಹಿಡಿಯುವಂತೆ ಒತ್ತಾಯ: ಈ ಭಾಗದಲ್ಲಿರುವ ತಾಲೂಕಿನ ಹಲವೆಡೆಗಳಲ್ಲಿ ಕೆಲ ತಿಂಗಳುಗಳಿಂದ ನಿರಂತರವಾಗಿ ಚಿರತೆ ದಾಳಿ ಮಾಡುತಿರುವುದು ಹೆಚ್ಚಾಗಿದೆ. ಆ ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಿರತೆ ಸೆರೆ ಹಿಡಿಯುವಂತೆ ತಾಲೂಕಿನಾದ್ಯಂತ ಜನರ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಹಸುಗಳು, ಕುರಿಗಳು,ಸಾಕು ಪ್ರಾಣಿಗಳು ಚಿರತೆ ದಾಳಿಗೆ ತುತ್ತಾಗಿದ್ದು ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ರೈತರು ಕೃಷಿ ಚಟುವಟಿಕೆಗಳಿಗಾಗಿ ಹೊಲಗಳಿಗೆ ತೆರಳುವುದು ಸಾಮಾನ್ಯ, ಈ ಸಂದರ್ಭದಲ್ಲಿ ಜರುಗಬಹುದಾದ ಜೀವ ಹಾನಿಗೆ ಇಲಾಖಾಧಿಕಾರಿಯೇ ನೇರಹೊಣೆ ಎಂದು ಮುಖಂಡರು ಗ್ರಾಮಗಳ ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಮಾನವ ಜೀವ ಹಾನಿಗಳು ಸಂಭವಿಸುವ ಮುನ್ನವೇ ಜಿಲ್ಲಾಡಳಿತ ಶೀಘ್ರದಲ್ಲಿ ಚಿರತೆಗಳನ್ನು ಸೆರೆಹಿಡಿದು, ಅರಣ್ಯ ಪ್ರದೇಶಕ್ಕೆ ಬಿಡಬೇಕು ಎಂದು ತಾಲೂಕಿನ ಬಹುತೇಕ ಗ್ರಾಮೀಣ ರೈತರು ಮತ್ತು ವಂದೇ ಮಾತರಂ ಜಾಗೃತಿ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು