ಆರೋಗ್ಯನಮ್ಮಜಿಲ್ಲೆ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಬಿಸಿ ನೀರು, ಮಾಸ್ಕ್ ಪೂರೈಕೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಿಶ್ವದಾದ್ಯಂತದ  ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ತಮ್ಮ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರು ಪೂರೈಕೆ, ಮಾಸ್ಕ್ ವಿತರಣೆಗೆ ಕ್ರಮ ಕೈಗೊಂಡಿದ್ದಾರೆ.

ಹುಬ್ಬಳ್ಳಿ  ಘಂಟಿಕೇರಿಯ ಶ್ರೇಯಾ ನಗರ, ಶಿರಡಿ ನಗರದ ವಿದ್ಯಾರ್ಥಿ ನಿಲಯಗಳು  ಧಾರವಾಡ ಸೈದಾಪೂರದ ಬಾಲಕಿಯರ ವಿದ್ಯಾರ್ಥಿನಿಲಯ,ಅಳ್ನಾವರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ,ಬೇಂದ್ರೆ ನಗರದ ಎಸ್.ಟಿ ಬಾಲಕಿಯರ ವಸತಿ  ಸೇರಿದಂತೆ ವಿವಿಧ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಬಿಸಿನೀರು ಪೂರೈಕೆ ವ್ಯವಸ್ಥೆ  ಹಾಗೂ ಮಾಸ್ಕ್ ಗಳನ್ನು ನೀಡಲಾಯಿತು.

ಕೊರೊನಾ ವೈರಸ್ ಹೇಗೆ ಹರಡುತ್ತದೆ ಹಾಗೂ  ತಡೆಯಲು  ತೆಗೆದುಕೊಳ್ಳಬಹುದಾದ ಕೆಲವೊಂದು ಸುಲಭ  ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಸ್ವಚ್ಛ ಹಾಗೂ ಕುದಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಬೇಕು  ಸರಿಯಾಗಿ ಬೇಯಿಸಿದ ಆಹಾರವನ್ನು ಸೇವಿಸಬೇಕು. ಬೇಯಿಸದೇ ಇರುವ ಹಾಗೂ ಶುಚಿತ್ವ ಇಲ್ಲದಿರುವ ಪದಾರ್ಥವನ್ನು ಸೇವಿಸಬೇಡಿ ಆಗಾಗ  ಕೈಯನ್ನು ಸಾಬೂನಿನಿಂದ ಇಲ್ಲವೇ ಹ್ಯಾಂಡ್ ವಾಶ್ ನಿಂದ ತೊಳೆಯುತ್ತಿರಬೇಕು.  ಸೋಂಕು ಹರಡದಿರಲು ಈ ಕ್ರಮ ಸಹಕಾರಿಯಾಗುತ್ತದೆ. ಭೇಟಿಯ ಸಂದರ್ಭದಲ್ಲಿ ಕೈಕುಲುಕುವ ಬದಲು ನಮಸ್ಕಾರ ಮಾಡಬೇಕು.ಮುಂಜಾಗ್ರತಾ  ಕ್ರಮಗಳನ್ನು ಪಾಲಿಸಿ  ಸುರಕ್ಷಿತವಾಗಿರುವಂತೆ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ