NEWSಕೃಷಿನಮ್ಮರಾಜ್ಯ

ಅಟಲ್‍ಜೀ ಜನಸ್ನೇಹಿ ಕೇಂದ್ರ ಸೇರಿದಂತೆ ವಿವಿಧ ಸೇವೆ ಒದಗಿಸಲು ಷರತ್ತುಬದ್ಧ ಅನುಮತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಟಲ್ ಜೀ ಜನಸ್ನೇಹಿ ಕೇಂದ್ರ, ಸ್ಪಂದನಾ ಕೇಂದ್ರ, ಸೇವಾಸಿಂಧು ಹಾಗೂ ಭೂಮಿಕೇಂದ್ರಗಳನ್ನು ತೆರೆದು ಆಧಾರ್ ನೋಂದಣಿ ತಿದ್ದುಪಡಿ ಸೇವೆ ಹೊರತುಪಡಿಸಿ ಸಾರ್ವಜನಿಕರ, ರೈತರ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಕೆಲ ಷರತ್ತುಗಳೊಂದಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶಿಸಿದ್ದಾರೆ.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಯನ್ನು ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಟಲ್ ಜೀ ಜನಸ್ನೇಹಿ ಕೇಂದ್ರ, ಸ್ಪಂದನಾ ಕೇಂದ್ರ, ಸೇವಾಸಿಂಧು ಹಾಗೂ ಭೂಮಿಕೇಂದ್ರಗಳ ಮುಂಭಾಗದಲ್ಲಿ ಗುರುತು ಮಾಡುವುದರೊಂದಿಗೆ ಸಾರ್ವಜನಿಕರಿಗೆ, ರೈತರಿಗೆ ಸ್ಯಾನಿಟೈಸರ್, ಸಾಬೂನು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು.

ಸಾರ್ವಜನಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದಾಗ ಒಬ್ಬೊಬ್ಬರೆ ನಿಲ್ಲುವುದು ಮತ್ತು ಒಬ್ಬರಿಂದ ಮತ್ತೊಬ್ಬರ ಮಧ್ಯೆ ಒಂದು ಮೀಟರ್‍ಗೆ ಎಳೆದು ಅಂತರವನ್ನು ಕಾಯ್ದುಕೊಳ್ಳಬೇಕು. ಸೌಲಭ್ಯ ಪಡೆದ ಸಾರ್ವಜನಿಕರು, ರೈತರು ಕೇಂದ್ರಗಳಿಂದ ತಕ್ಷಣವೇ ತೆರಳಬೇಕು. ಸದರಿ ಆದೇಶವನ್ನು ಪಾಲಿಸದಿದ್ದಲ್ಲಿ ವಿಕೋಪ ನಿರ್ವಹಣಾ ಕಾಯ್ದೆ 2005ರಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ