NEWSನಮ್ಮಜಿಲ್ಲೆ

ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ ಬೇಕರಿ, ಸಲೂನ್ ಓಪನ್‌

ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ ಎಂದು ಲಾಕ್ ​ಡೌನ್ ಸಡಿಲಿಸಿದ ಜಿಲ್ಲಾಧಿಕಾರಿ ವೆಂಕಟೇಶ್‌

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದೇಶಾದ್ಯಂತ ಲಾಕ್​ಡೌನ್​ ಮತ್ತಷ್ಟು ಬಿಗಿಗೊಳ್ಳುತ್ತಿದೆ ಆದರೆ ಮಂಡ್ಯದಲ್ಲಿ ಯಾವುದೇ ಕೊರೊನಾ ಪೀಡಿತರು ಪತ್ತೆಯಾಗಿಲ್ಲ ಎಂಬ ಒಂದೇ ಒಂದು ಕಾರಣವನ್ನಿಟ್ಟುಕೊಂಡು ಲಾಕ್‌ಡೌನ್‌ ಸಡಿಲಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​​ ಆಲೋಚಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾಡಳಿತ ಹಂತ ಹಂತವಾಗಿ ಲಾಕ್ ​ಡೌನ್ ಸಡಿಲಗೊಳಿಸಲು ಮುಂದಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಿ ಶನಿವಾರಂದಿ ಬೇಕರಿ, ಸಲೂನ್ ತೆರೆಯಲು ಅನುಮತಿಯನ್ನೂ ನೀಡಿದೆ.

ಒಂದಷ್ಟು ಸಲಹೆಗಳನ್ನು ನೀಡಿದ್ದು, ಬೇಕರಿಯಲ್ಲಿ ಮಾಸ್ಕ್​ ಮತ್ತು ಹ್ಯಾಂಡ್​ ಗ್ಲೌಸ್​ ಬಳಸುವುದು ಕಡ್ಡಾಯ ಎಂದು ಸೂಚನೆ ನೀಡಿದ್ದಾರೆ.  ಜಿಲ್ಲೆಯಲ್ಲಿ ಮಾಂಸ ಮಾರಾಟದ ಮೇಲಿದ್ದ ನಿರ್ಬಂಧವನ್ನು ನಿನ್ನೆಯಿಂದ ಸಡಿಲಿಸಿ ಕೋಳಿ, ಕುರಿ, ಮೇಕೆ, ಮೀನು ಮಾಂಸ ಮಾರಾಟ ನಡೆಸಲಾಗುತ್ತಿದೆ.

ಇದೀಗ ಬೇಕರಿ ಹಾಗೂ ಸಲೂನ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಜಿಲ್ಲಾಡಳಿತದ ಈ ಕ್ರಮ ಜನರಲ್ಲಿ ಆತಂಕ ಮೂಡಿಸಿದೆ.  ಮೈಸೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರುತ್ತಿದೆ. ಇಂಥ ವೇಳೆಯಲ್ಲಿ ಮೈಸೂರಿನ ಪಕ್ಕದ ಜಿಲ್ಲೆಯಲ್ಲಿ ಸಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿರುವುದು  ಭಯದ ವಾತಾವರಣಕ್ಕೂ ಎಡೆಮಾಡಿಕೊಟ್ಟಿದೆ.

ಈ ನಿಯಮ ಸಡಿಲಿಕೆಯಿಂದ ಜನ ಗುಂಪಾಗಿ ಸೇರುವ ಸಾಧ್ಯತೆಯೇ ಹೆಚ್ಚಿದ್ದು, ಮುಂಜಾಗ್ರತೆ ವಹಿಸದಿದ್ದರೆ ಸೋಂಕಿನಿಂದ ಪಾರಾಗುವುದು ಕಷ್ಟ ಎಂಬುದನ್ನು ಜಿಲ್ಲಾಡಳಿತ ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಬೇಕು ಎಂಬುವುದು ಪ್ರಜ್ಞಾನವಂತರ ಅಭಿಪ್ರಾಯವಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ