NEWSನಮ್ಮರಾಜ್ಯಶಿಕ್ಷಣ-

ಇಂದು ಮುಗಿದೇ ಹೋಗಿತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ!?

ಮಾ.27ರಂದು ಆರಂಭವಾಗಬೇಕಿದ್ದ ಎಕ್ಸಾಂ l ವಿಶ್ವಮಾರಿ ಕೊರೊನಾದಿಂದ ದೂರ...ದೂರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾ.27ರಂದು ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಇದರಿಂದ ಎಸ್‌ಎಸ್‌ಎಲ್‌ಸಿಯ ಎಲ್ಲಾ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.!?

ಹೌದು! ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿಪಡಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯಕ್ಕೆ ಸರಿಯಾಗಿ ಆಗಿದ್ದರೆ ಈ ರೀತಿಯ ಶೀರ್ಷಿಕೆಯೊಂದಿಗೆ ದೃಶ್ಯ ಮತ್ತು ಪ್ರಿಂಟ್‌ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿತ್ತು.

ಆದರೆ, ಕೊರೊನಾ ಎಂಬ ವಿಶ್ವ ಹೆಮ್ಮಾರಿ ಆವರಿಸಿದ್ದು, ನಡೆಯಬೇಕಿದ್ದ ಪರೀಕ್ಷೆ ಅರ್ನಿದಿಷ್ಟ ಅವಧಿವರೆಗೆ ಮುಂದೂಡಿದೆ. ಪರಿಣಾಮ ಎಲ್ಲಾ ವಿಷಯದ ಪರೀಕ್ಷೆಗಳನ್ನು ಬರೆದು ಇಂದು ಕೊನೆಯ ವಿಷಯವಾದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಎಲ್ಲಾ ವಿದ್ಯಾರ್ಥಿಗಳು ನಿರಾಳರಾಗುತ್ತಿದ್ದರು. ಆದರೆ ಇಲ್ಲಿ ತಾನೊಂದು ಬಗೆದರೆ ದೈವವೊಂದು ಬಗೆದಂತೆ ಎಂಬ ಗಾದೆ ಮಾತುನಂತೆ ವಿದ್ಯಾರ್ಥಿಗಳು ಅಡಕತ್ತರಿಯಲ್ಲಿ ಇಂದು ಸಿಲುಕಿ ಒದ್ದಾಡುತ್ತಿದ್ದಾರೆ.

ಇಂದು ವಿದ್ಯಾರ್ಥಿಗಳಲ್ಲಿ ನಿರಾಳತೆ ಬದಲು ಆತಂಕದ ಛಾಯೆ ಮನೆಮಾಡಿದೆ. ನಮಗೆ ಪರೀಕ್ಷೆ ನಡೆಯುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ಸಮಯವನ್ನು ಇಂದಿಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ದೂಡುತ್ತಿದ್ದಾರೆ. ಜತೆಗೆ ಪರೀಕ್ಷೆ ಸಮಯ ಮುಂದೊಂದುದಿನ ನಿಗದಿಯಾದರೆ ನಾವು ಮತ್ತೆ ಯಾವರೀತಿ ಪರೀಕ್ಷೆಗೆ ತಯಾರಿ ನಡೆಸಬೇಕು ಎಂಬ ಭಯದಲ್ಲಿಯೂ ಕಾಲ ದೂಡುತ್ತಿದ್ದಾರೆ.

ಇದನ್ನೂ ಓದಿರಿ ಮಾರ್ಚ್ 27 ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ

ಇನ್ನು ಕೆಲ ವಿದ್ಯಾರ್ಥಿಗಳು ನಮಗೆ ಯಾವ ಸಮಯದಲ್ಲಿ ಬೇಕಾದರೂ ಪರೀಕ್ಷೆ ದಿನಾಂಕ ನಿಗದಿಯಾಗಲಿ. ಮನಗೇನು ಭಯವಿಲ್ಲ. ನಾವು ಪರೀಕ್ಷೆ ಬರೆಯಲು ಸದಾ ಸಿದ್ಧರಿದ್ದೇವೆ ಎಂದು ಹೇಳುತ್ತಲ್ಲೂ ಇದ್ದಾರೆ.

ಒಟ್ಟಾರೆಯಾಗಿ ಯಾವುದೇ ಸಮಸ್ಯೆ ಇಲ್ಲದೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿಪಡಿಸಿದ್ದ ಸಮಯಕ್ಕೆ ಸರಿಯಾಗಿ ಎಕ್ಸಾಂ ಮುಗಿದಿದ್ದರೆ ಇಂದು ವಿದ್ಯಾರ್ಥಿಗಳಲ್ಲಿರುವ ಆತಂಕ ದುಗುಡ ದೂರವಾಗುತ್ತಿತ್ತು. ಆದರೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್‌ 19 ವಿದ್ಯಾರ್ಥಗಳನ್ನು ಒಂದು ರೀತಿಯಲ್ಲಿ ಪೀಡಿಸದೆಬಿಡುತ್ತಿಲ್ಲ.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ