NEWSದೇಶ-ವಿದೇಶ

ಈವರೆಗೆ ದೇಶದಲ್ಲಿ 239ಮಂದಿ ಕೊರೊನಾಗೆ ಬಲಿ

ಕರ್ನಾಟಕದ 207 ಮಂದಿ ಸೇರಿ ಭಾರತದಲ್ಲಿ 7447  ಸೋಂಕಿತರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 24 ಗಂಟೆಗಳಲ್ಲಿ ಭಾರತದ 40 ಮಂದಿ ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ. ಜತೆಗೆ 1035 ಹೊಸ ಪ್ರಕರಣಗಳು ವರದಿಯಾಗಿವೆ, ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಶುಕ್ರವಾರ ಕಂಡುಬಂದ ಅತಿಹೆಚ್ಚು ಪ್ರಕರಣವಾಗಿವೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7447ಕ್ಕೇರಿದ್ದು ಅವರಲ್ಲಿ 6565 ಸೋಂಕಿತರು, 643 ಮಂದಿ ಗುಣಮುಖರಾಗಿದ್ದಾರೆ. ಇನ್ನು ಕೆಲವರು ವಲಸೆ ಹೋದವರು ಹಾಗೂ 239 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ಹೇಳುತ್ತಿದೆ.

ಜಾರ್ಖಂಡ್ ನಲ್ಲಿ 3 ಹೊಸ ಕೇಸುಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 17ಕ್ಕೇರಿದೆ. ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ 5 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬಿಹಾರದಲ್ಲಿ ಸೋಂಕಿತ 60 ವ್ಯಕ್ತಿಗಳಲ್ಲಿ 23 ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ಆರೋಗ್ಯ ಸಚಿವಾಲಯ ಹೇಳುವ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕು ಇನ್ನೂ ಮೂರನೇ ಹಂತ ತಲುಪಿಲ್ಲ. ಆದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.

ನಮ್ಮ ದೇಶದಲ್ಲಿ ಒಡಿಶಾ ನಂತರ ಇದೀಗ ಪಂಜಾಬ್ ಸರ್ಕಾರ ಲಾಕ್ ಡೌನ್ ನ್ನು ಮೇ 1ರವರೆಗೆ ವಿಸ್ತರಿಸಿದೆ. ಪಂಜಾಬ್‌ ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯ ಹಂತಕ್ಕೆ ತಲುಪಲು ಆರಂಭವಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್‌ ನೇತೃತ್ವದ ಸರ್ಕಾರವೂ ಮೇ 1ವರೆಗೆ ಲಾಕ್‌ಡನ್‌ ಮುಂದುವರಿಸುವ ಕ್ರಮ ಕೈಗೊಂಡಿದೆ.

ಇನ್ನು ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕೆಲ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿದೆ. 207 ಸೋಂಕಿತರಿಂದ್ದು, 6 ಮಂದಿ ಅಸುನೀಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ