NEWSನಮ್ಮರಾಜ್ಯ

ಕಂಗಾಲಾಗಿರುವ ಜನರ ಜೀವನಕ್ಕೆ ನೆರವಾಗಿ ಆತ್ಮವಿಶ್ವಾಸ ತುಂಬಿ

ಲಾಕ್‍ಡೌನ್ ನಿಬಾಯಿಸಲು ಸಿದ್ಧರಾಗಿ l ಜಿಲ್ಲಾಡಳಿತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜನ ಸಾಮಾನ್ಯರು ಹಾಗೂ ರೈತಾಪಿ ಜನರ ಬದುಕು ತೊಂದರೆಗೆ ಸಿಲುಕಿದೆ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಡ ಕುಟುಂಬಗಳು ಕೆಲಸ ಇಲ್ಲದೇ ಕಂಗಾಲಾಗಿದ್ದು ಅವರ ಜೀವನಕ್ಕೆ  ನೆರವಾಗಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಕೊರೊನಾ ಲಾಕ್‍ಡೌನ್ ಸಮಸ್ಯಯಿಂದ ಸಂಕಷ್ಟಕ್ಕೊಳಗಾದ ಜನರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಹಲವು ಸಲಹೆಗಳನ್ನು ನೀಡಿದರು.

ಅಕ್ಕಿ ಗೋಧಿ ಬೇಳೆ ಜೊತೆಗೆ ತೀವ್ರ ಬಡತನ ಎದುರಿಸುತ್ತಿರುವವರಿಗೆ ಇತರ ದಿನಬಳಕೆ ಸಾಮಗ್ರಿ ವಿತರಿಸಬೇಕು. ರೈತರ ಉತ್ಪಾದನೆಗಳು ಹಾಳಾಗದಂತೆ ಸೂಕ್ತ ಸಾಗಾಟದ ವ್ಯವಸ್ಥೆ ಮತ್ತು ಮಾರುಕಟ್ಟೆ ಒದಗಿಸಬೇಕು.  ಜಿಲ್ಲಾಡಳಿತ, ಎ.ಪಿ.ಎಂ.ಸಿ., ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಪ್‍ಕಾಮ್ಸ್‍ಗಳ ನೆರವು ಪಡೆದು ರೈತರಿಗೆ ಸಂಪರ್ಕ ಸೇತುವಾಗಬೇಕು ಎಂದು ಹೇಳಿದರು.

ಕೊರೊನಾ ಲಾಕ್‍ಡೌನ್ ನಿರ್ವಾಹಣೆ ನಡುವೆ ಗ್ರಾಮೀಣಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾ ಪಂಚಾಯ್ತಿ ಸಿ.ಇ.ಓ. ಹಾಗೂ ತಹಸೀಲ್ದಾರರು ನಿಗಾವಹಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಹೇಳಿದರು.

ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮಾತನಾಡಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಅಭಿನಂದನಾರ್ಹ. ಆದರೆ ಕೆಲವು ಜಿಲ್ಲೆಗಳು ಸರಕು ಸಾಗಣೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿವೆ ಹಣ್ಣು ತರಕಾರಿಗಳ ಪೂರೈಕೆಗೆ ಅವಕಾಶ ನಿರ್ಬಂಧಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ನೆರೆ ಹೊರೆಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.

ಶಾಸಕರಾದ ಎಚ್.ಡಿ. ರೇವಣ್ಣ ಮಾತನಾಡಿ ಎಲ್ಲಾ ಎ.ಪಿ.ಎಂ.ಸಿ.ಗಳಲ್ಲಿ ರೈತರ ಹಿತ ಸಂರಕ್ಷಣೆಯ ಕಾರ್ಯಗಳಾಗಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಲಾಭಾಂಶ ರೈತರಿಗೆ ನೇರವಾಗಿ ದೊರೆಯುವಂತಾಗಬೇಕು ಎಂದರು.

ಅರ್ಧಕ್ಕೆ ನಿಂತಿರುವ ಅಥವಾ ಮುಕ್ತಾಯದ ಹಂತದಲ್ಲಿರು ಕಾಮಗಾರಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಮರು ಕೆಲಸಕ್ಕೆ ಅವಕಾಶ ನೀಡಬೇಕು ಹಾಗೂ ಎಲ್ಲಾ ಗ್ರಾಮಗಳ ಕೆರೆಗಳ ಹೂಳು ತೆಗೆಯುವ ಕಾರ್ಯಕ್ಕೆ ಆದ್ಯತೆ ನೀಡಿ ಮಾಡಿಸಬೇಕು ಎಂದು ಹೆಚ್.ಡಿ. ರೇವಣ್ಣ ಹೇಳಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಪಡಿತರ ವಿತರಣೆ ತರಕಾರಿ ವ್ಯಾಪಾರ ಎ.ಪಿ.ಎಂ.ಸಿ. ವ್ಯವಸ್ಥೆಗಳಿಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.  ನಿರಾಶ್ರಿತರು, ಕೂಲಿಕಾರ್ಮಿಕರ ಹಸಿವು ನೀಗಲು ಎಸ್.ಡಿ.ಆರ್.ಎಫ್ ನಿದಿಯಡಿ ತಾಲ್ಲೂಕು ಆಡಳಿತಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಅಗತ್ಯಕ್ಕೆ ತಕ್ಕಂತೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು.

ಶಾಸಕರಾದ ಎ.ಟಿ. ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಸಿ.ಎನ್. ಬಾಲಕೃಷ್ಣ ಹಾಗೂ ಕೆ.ಎಸ್. ಲಿಂಗೇಶ್  ಅವರು ಮಾತನಾಡಿ, ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದ್ದು ಇದನ್ನು ಸಂಪೂರ್ಣ ನಿಯಂತ್ರಿಸಬೇಕು. ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವಾ ವಾಹನಗಳಲ್ಲಿಯೂ ಮದ್ಯ ಸಾಗಾಟದ ಗುಮಾನಿಯಿದ್ದು, ಗಮನಹರಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರೂ ಸಹ ಕೊರೋನಾ ನಿಯಂತ್ರಣ ಕ್ರಮಗಳು ಹಾಗೂ ಲಾಕ್‍ಡೌನ್ ಪರಿಸ್ಥಿತಿ ನಿಭಾಯಿಸಲು ಮಾಡಿರುವ ಸುಧಾರಣೆಗಳ ಬಗ್ಗೆ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ. ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್ ವಿವಿಧ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ