ರಾಜಕೀಯವಿದೇಶ

ಕೊರೊನಾ ನಿಗ್ರಹಕ್ಕೆ 200 ಕೋಟಿ ರೂ. ಬಿಡುಗಡೆ :  ಸಿಎಂ ಯಡಿಯೂರಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಾಣು ನಿಗ್ರಹಕ್ಕೆ ಸರ್ಕಾರ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ 200 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿಧಾನ ಸೌಧದಲ್ಲಿ ಇಂದು ಕೋರೋನಾ ಕುರಿತು ಹಮ್ಮಿಕೊಂಡಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾತನಾಡಿದ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು ಅದರಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಈ ಸಮಿತಿ ಪ್ರತಿ ದಿನ ಸಭೆ ಸೇರಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗಗೆ ಜನರಿಗೆ ತಿಳಿಸುವುದಲ್ಲದೆ, ದಿನಕ್ಕೆರಡು ಬಾರಿ ಬುಲೆಟಿನ್ ಸಹ ಬಿಡುಗಡೆ ಮಾಡಲಿದೆ ಎಂದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ವಿಧಾನ ಸೌಧ, ವಿಕಾಸಸೌಧಕ್ಕೆ ಜನ ಬಾರದಂತೆ ನಿಷೇಧ ಹೇರಲಾಗಿದೆ. ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರ, ಮಂಗನ ಕಾಯಿಲೆ ಹಾಗೂ ಹಂದಿ ಜ್ವರವನ್ನು ಸಹ ನಿಗ್ರಹ ಮಾಡುವುದಾಗಿ ತಿಳಿಸಿ, ಮಾರ್ಚ್ 31ರ ತನಕ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಜನ ಭಾಗವಹಿಸಬಾರದು. 100ರಿಂದ 150 ಜನ ಒಳಪಟ್ಟು ಮದುವೆ ಸಮಾರಂಭ ಕೈಗೊಳ್ಳಲು ತಿಳಿಸಲಾಗಿದೆ ಎಂದು ತಿಳಿಸಿದರು.

ನಂತರ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸದಸ್ಯರಾದ ಸಿದ್ದರಾಮಯ್ಯ ಎಲ್ಲಾ ಆಸ್ಪತ್ರೆಗಳಲ್ಲೂ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು. ಖಾಸಗಿ ಆಸ್ಪತ್ರಗಳಲ್ಲೂ ಸಹ ಕೋರೋನಾ ಪೀಡಿತ ರೋಗಿಗಳನ್ನು ನಿರಾಕರಿಸದೆ ದಾಖಲಿಸಿಕೊಳ್ಳಬೇಕು. ನೊಂದಾಯಿತ ಸೊಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ತಿಳಿಸಿದರು.

ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಆರೋಗ್ಯದ ತುರ್ತು ಪರಿಸ್ಥತಿ ಎಂದು ಘೋಷಿಸಿದೆ. ಜನರು ಇದಕ್ಕಾಗಿ ಹೆದರುವ ಬದಲಾಗಿ ಇದನ್ನು ತಡೆಗಟ್ಟಲು ಎಲ್ಲರೂ ಸಮರೋಪಾದಿಯಲ್ಲಿ ಕೈಜೋಡಿಸಬೇಕೆಂದು ತಿಳಿಸದರು.

ಹೊರದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ಇವರನ್ನು ಗುರುತಿಸುವ ನಿಟ್ಟಿನಲ್ಲಿ ಅವರ ಬಲಗೈಗೆ ಠಸ್ಸೆ ಹಾಕಲಾಗಿದೆ. ಚೀನದಲ್ಲಿ 80881 ಕರೋನಾ ದೃಢ ಪ್ರಕರಣಗಳಲ್ಲಿ 68709 ಜನ ಗುಣಮುಖರಾಗಿದ್ದಾರೆ. ಇದರ ಒಟ್ಟು ಸಾವಿನ ಸಂಖ್ಯೆ 0.5 ರಿಂದ 3.4 ರಷ್ಟಿದೆ. ಕೊರೊನಾ ತಗುಲಿದರೆ ಸಾವು ನಿಶ್ಚಿತ ಎಂದು ಜನ ಭಾವಿಸಬಾರದು. ಶಂಕಿತ ಸೊಂಕು ಇರುವವರು ಆದಷ್ಟು ಜನರಿಂದ ದೂರವಿರಬೇಕು. ಸರ್ಕಾರ ಟಾಸ್ಕ್‍ಪೋರ್ಸ್ ರಚಿಸಿ 200 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯ 104 ಸಂಖ್ಯೆಯ ಸಹಾಯವಾಣಿಯನ್ನು ಸಹ ಸ್ಥಾಪಿಸಲಾಗಿದೆ. ಕೋರೋನಾ ಶಂಕಿತರನ್ನು ಸ್ವಯಂಚಾಲಿತ ದೂರವಾಣಿ ಸಂಪರ್ಕ ಕಲ್ಪಿಸಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ