ಸಂಸ್ಕೃತಿ

ಕೊರೊನಾ ಭೀತಿಗೆ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಬಂದ್‌

ವಿಜಯಪಥ ಸಮಗ್ರ ಸುದ್ದಿ

ಬೇಲೂರು: ಇಡಿ ಜಗತ್ತನ್ನೆ ಬೆಚ್ಚಿಬೀಳಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 900 ವರ್ಷಗಳ ಇತಿಹಾಸವಿರುವ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಬಾಗಿಲನ್ನು ಮಂಗಳವಾರ (ಮಾ.17)ದಿಂದ ಮಾ.31ರ ವರೆಗೆ ಮುಚ್ಚಲಾಗಿದೆ.

ಕೇಂದ್ರ ಸರಕಾರದ ಆದೇಶದಂತೆ ಕೇಂದ್ರಪುರಾತತ್ವ ಇಲಾಖೆ ಅಧಿಕಾರಿಗಳು ದೇಗುಲದ ದ್ವಾರಗೋಪುರದ ಬಾಗಿಲನ್ನು ಮುಚ್ಚಿದರು. ಬೆಳಗ್ಗೆ ಅರ್ಚಕರು ದೇಗುಲಕ್ಕೆ ಆಗಮಿಸುವ ವೇಳೆಗೆ ಬಾಗಿಲು ಮುಚ್ಚಲ್ಪಟ್ಟಿತ್ತಾದರೂ ಪೂಜಾಕಾರ್ಯ ನಿಮಿತ್ತ ನಂತರ ಭಾಗಶಃ ತೆರೆಯಲಾಯಿತು. ಅರ್ಚಕರು ಎಂದಿನಂತೆ ದೇವರಿಗೆ ಪೂಜೆ ಸಲ್ಲಿಸಿದರು. ಆದರೆ ಪ್ರವಾಸಿಗರಿಗೆ, ಭಕ್ತರಿಗೆ ಪ್ರವೇಶ ನೀಡಲಿಲ್ಲ. ಇದರಿಂದ ದೂರದೂರಿನಿಂದ ಆಗಮಿಸಿದ್ದ ಭಕ್ತರು ನಿರಾಸೆಗೊಂಡರು. ಭಕ್ತರು, ದ್ವಾರಗೋಪುರದ ಬಾಗಿಲ ಬಳಿಯಿರುವ ಬಲಿಪೀಠದ ಮೇಲೆ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ದೇಗುಲ ನಿರ್ಮಾಣದ ನಂತರ ಈವರಗೆ ದ್ವಾರಗೋಪುರದ ಬಾಗಿಲನ್ನು ಮುಚ್ಚಿರಲಿಲ್ಲ. ಹಲವು ವರ್ಷಗಳ ಹಿಂದೆ ಸಾಮೂಹಿಕವಾಗಿ ಪ್ಲೇಗ್, ಕಾಲರ ರೋಗ ಬಂದಿದ್ದ ಸಮಯದಲ್ಲೂ ಸಹ ದೇಗುಲದ ಬಾಗಿಲನ್ನು ಮುಚ್ಚಿರಲಿಲ್ಲ. ಇದೀಗ ಇದು ಅನಿವಾರ್ಯ ಎನ್ನಲಾಗಿದೆ. ದೇಗುಲದ ಬಾಗಿಲು ಇದೇ ಮಾರ್ಚ್‌ 31ರವರೆಗೆ ಮುಚ್ಚಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ