NEWSಆರೋಗ್ಯ

ಕೊರೊನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು

ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಜಾಥಾಗೆ ಸಚಿವ ಶ್ರೀರಾಮುಲು ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಕೊರೊನಾ ವೈರಸ್ ಕುರಿತು ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಬಿ.ಶ್ರೀರಾಮುಲು ಚಾಲನೆ ನೀಡಿದರು.

ನೋವೆಲ್  ಕೊರೊನಾ ವೈರಸ್ ಸಮುದಾಯದಲ್ಲಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ಜಿಲ್ಲಾಸ್ಪತ್ರೆ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ  ಮಾತನಾಡಿದ ಸಚಿವರು,  ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ತಗೆದುಕೊಂಡಲ್ಲಿ ಸುರಕ್ಷಿತವಾಗಿರಬಹುದು ಎಂದು ತಿಳಿಸಿದರು.

ಪ್ರಧಾನಮಂತ್ರಿಗಳು ಈಗಾಗಲೇ 21 ದಿನಗಳ ಕಾಲ ದೇಶದ್ಯಾಂತ ಲಾಕ್‍ಡೌನ್ ಮಾಡಿದ್ದು, ಸರ್ಕಾರದ ಆದೇಶದಂತೆ ಸಾರ್ವಜನಿಕರು ಪಾಲಿಸಬೇಕು. ಅನಾವಶ್ಯಕವಾಗಿ ಹೊರಗಡೆ ತಿರುಗಾಡುವುದಾಗಲಿ ಮಾಡಬಾರದು ಎಂದರು.

ಆಟೋ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಆಟೋ ಮೂಲಕ ಕರೋನಾ ವೈರಸ್ ಕುರಿತು ಜಾಗೃತಿ ನೀಡುವ ಸಂದೇಶಗಳನ್ನು ಸಾರ್ವಜನಿಕರು ಪಾಲಿಸಬೇಕು. ಯಾರದರಾದರೂ ವಿದೇಶಿಯಿಂದ ಬಂದ ವ್ಯಕ್ತಿಗಳ ಇದ್ದಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದರು.

ಯಾರಿಗಾದರೂ ಕೆಮ್ಮು, ಜ್ವರ, ಸೀತ, ನೆಗಡಿ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ಸೋಂಕು ಹರಡುವುದನ್ನು ತಡೆಯಲು ಮಾಸ್ಕ್‌ ಬಳಸಿ ಹಾಗೂ ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುತ್ತೀರಿ ಎಂದರು.

ಶಾಸಕ ಸೋಮಶೇಖರೆಡ್ಡಿ, ಗ್ರಾಮೀಣ ಶಾಸಕ ನಾಗೇಂದ್ರ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ.ಬಿ.ಕೆ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಹಕ ಆರ್.ಎನ್.ಶಿವರಾಜ್  ಇತರರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್