NEWSನಮ್ಮಜಿಲ್ಲೆ

ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳಿಗೆ ವಿನಾಯಿತಿ

 ಕೊರೊನಾ ತಡೆಗೆ ಲಾಕ್ ಡೌನ್ l  ಅಗತ್ಯ ಸೇವೆಗಳ ವಾಹನ ಸಂಚಾರ ಮುಕ್ತ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ:  ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಜಿಲ್ಲೆಯಾದ್ಯಂತ 144 ಜಾರಿಗೊಳಿಸಿ, ಸಾರ್ವಜನಿಕರಿಗೆ ಮನೆಯಿಂದ ಹೊರಬಂದಂತೆ ಆದೇಶಿಸಲಾಗಿದೆ.

ಆದರೆ ತರಕಾರಿ, ಹಾಲು, ಕಿರಾಣಿ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಪೂರೈಕೆ ಮಾಡಲು ಹಾಗೂ ಕೋವಿಡ್ 19 ತಡೆಗಟ್ಟುವ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ, ಖಾಸಗಿ ಸಂಸ್ಥೆಯ ವಾಹನಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ಇಲಾಖೆ, ಕಚೇರಿಗಳಿಂದ ನೀಡಲ್ಪಟ್ಟ ಗುರುತಿನ ಚೀಟಿಗಳನ್ನು ಹೊಂದಿರುವ ಕರ್ತವ್ಯ ನಿರತರಿಗೆ ಅವರ ಕಾರ್ಯಕ್ಷೇತ್ರದಲ್ಲಿ ವಿನಾಯಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ವಾಹನಗಳಿಗೆ ವಿನಾಯಿತಿ ಇದೆ. ಸರ್ಕಾರ ಹೊರಗುತ್ತಿಗೆ ಮೂಲಕ ಪಡೆದುಕೊಂಡ ಖಾಸಗಿ ವಾಹನಗಳಿಗೆ ಜಿಲ್ಲಾಡಳಿತ ವಾಹನ ಪಾಸುಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಅಗತ್ಯ ವಸ್ತುಗಳ ಮಾರಾಟ ಮಾಡುವ ಅಂಗಡಿಯವರು ಮತ್ತು ಸಿಬ್ಬಂದಿ ವಾಹನಗಳಿಗೆ , ಸರ್ಕಾರಿ ಮತ್ತು ಖಾಸಗಿ ವೈದ್ಯರು, ನರ್ಸ್ ಗಳು, ಅರೆ ವೈದ್ಯಕೀಯ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಿಬ್ಬಂದಿ , ಪತ್ರಿಕಾ ವಿತರಣೆ ವಾಹನಗಳು, ಪತ್ರಿಕೆ ಹಂಚುವವರು, ಅವಶ್ಯ ಸರಕು ಸೇವೆಗಳ ಸಾಗಾಣಿಕೆ ವಾಹನಗಳು, ಅವಶ್ಯಕ ಸಾಮಗ್ರಿಗಳ ಉತ್ಪಾದನಾ ಕಾರ್ಖಾನೆಗಳ ಕಾರ್ಮಿಕರಿಗೆ ಸರ್ಕಾರದ ಸುತ್ತೋಲೆಯ ನಿರ್ಬಂಧದಂತೆ ಅವರ ವಾಸ ಸ್ಥಳದಿಂದ ಕಾರ್ಖಾನೆಯ ಸ್ಥಳಕ್ಕೆ ಹೋಗಿ ಬರಲು ಹಾಗೂ ಜಿಲ್ಲಾಡಳಿತ ಕೋವಿಡ್ 19 ಸೇವೆಯಲ್ಲಿ ನಿರತರಾದವರಿಗೆ ನೀಡಿದ ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳು ಮತ್ತು ವಾಹನಗಳಿಗೆ ಸಂಚರಿಸಲು ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ