NEWSಆರೋಗ್ಯದೇಶ-ವಿದೇಶ

ಜಗತ್ತಿನ 3ನೇ ಒಂದರಷ್ಟು ಸೋಂಕಿತರನ್ನು ಹೊಂದಿದ ಅಮೆರಿಕ !

ಸಾವಿನ ಸಂಖ್ಯೆಯಲ್ಲೂ ಮೊದಲ ಸ್ಥಾನಲ್ಲಿ ವಿಶ್ವದ ದೊಡ್ಡಣ್ಣ l ಆತಂಕದಲ್ಲಿ ನಾಗರಿಕರು

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್‌ಟನ್‌: ವಿಶ್ವಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಅಮೆರಿಕದಲ್ಲಿ ಮುಂದುವರಿಸಿದ್ದು, ಕೋವಿಡ್‌ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಸಾಗುತ್ತಿದ್ದು, ಇರುವರೆಗೂ 10,35,800 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ ಸುಮಾರು 60 ಸಾವಿರ ಮಂದಿ ಮೃತಪಟ್ಟಿದ್ದಾರೆ.

ಈ ಅಂಕಿ ಅಂಶಗಳ ಮೂಲಕ ಅಮೆರಿಕ ಇಂದು ಜಗತ್ತಿನ 3ನೇ ಒಂದರಷ್ಟು ಸೋಂಕಿತರನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇಲ್ಲಿ ಯಮಸ್ವರೂಪಿ ಕೊರೊನಾ ತನ್ನ ಕಬಂಧ ಬಾಹುವನ್ನು ಚಾಚಿದ್ದು, ನಾಗರಿಕರು ತತ್ತರಿಸಿ ಹೋಗಿದ್ದಾರೆ.

ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 30.70 ಲಕ್ಷ ದಾಟಿದ್ದು, ಈವರೆಗೂ 2.18 ಲಕ್ಷ ಜನರು ಸಾವಿಗೀಡಾಗಿದ್ದಾರೆ. 9.5 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದು, ಮನೆಗೆ ಮರಳಿದ್ದಾರೆ ಎಂದು ವಿಶ್ವಾ ಆರೋಗ್ಯ ಸಂಸ್ಥೆ ತಿಳಿಸಿದೆ.

ಇನ್ನು ಅಮೆರಿಕದ ನಂತರ ಹೆಚ್ಚು ಪ್ರಕರಣಗಳು ವರದಿಯಾಗಿರುವುದು ಸ್ಪೇನ್‌ನಲ್ಲಿ. 2.32 ಲಕ್ಷ ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 24 ಸಾವಿರ ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಇಟಲಿಯಲ್ಲಿಯೂ ಸೋಂಕಿತರ ಸಂಖ್ಯೆ 2 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 27 ಸಾವಿರಕ್ಕೂ ಹೆಚ್ಚು ಏರಿಕೆ ಆಗಿದೆ.

ಫ್ರಾನ್ಸ್‌ ಮತ್ತು ಇಂಗ್ಲೆಂಡ್‌ನಲ್ಲಿ ತಲಾ1.60 ಲಕ್ಷಕ್ಕಿಂತಲೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕ್ರಮವಾಗಿ 23 ಸಾವಿರ ಮತ್ತು 21 ಸಾವಿರ ಮಂದಿ ಅಸುನೀಗಿದ್ದಾರೆ.

ಚೀನಾದಲ್ಲಿ 82,858 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, 4,633 ಜನರು ಸಾವನ್ನಪ್ಪಿದ್ದಾರೆ. 77 ಜನರು ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಾಸ್ತವದ ವರದಿ ಇನ್ನು ಸಸಿಗಬೇಕಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಲವು ಬಾರಿ ಹೇಳಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ